ದೇಶ- ವಿದೇಶ

ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪ : 360 ಕ್ಕೂ ಹೆಚ್ಚು ಮಂದಿ ಸಾವು

ಅಂಕಾರಾ: ಟರ್ಕಿ ಮತ್ತು ಸಿರಿಯಾದಲ್ಲಿ ಪ್ರಕೃತಿ ತಾಂಡವವಾಡಿದೆ. ಇಂದು ಮುಂಜಾನೆ ಸಂಭವಿಸಿದ ಪ್ರಬಲ ಭೂಕಂಪನಕ್ಕೆ ಉಭಯ ರಾಷ್ಟ್ರಗಳು ತತ್ತರಿಸಿ ಹೋಗಿವೆ. 7.8 ತೀವ್ರತೆಯ ಭೂಕಂಪನದಲ್ಲಿ 360 ಕ್ಕೂ ಅಧಿಕ ಜನರು ಈವರೆಗೂ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ನೂರಾರು ಕಟ್ಟಡಗಳು ಧರಾಶಾಯಿಯಾಗಿದ್ದು, ಜನರು ಅವಶೇಷಗಳಡಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಭೀಕರ ದುರಂತದ ದೃಶ್ಯಟರ್ಕಿ, ಸಿರಿಯಾ ಮಾತ್ರವಲ್ಲದೇ, ಈಜಿಪ್ಟ್​​ನ ಕೈರೋದವರೆಗೂ ಭೂಕಂಪನ ಅನುಭವವಾಗಿದೆ. ಭೂಮಿ ನಡುಕದಿಂದ ದೊಡ್ಡ ದೊಡ್ಡ ಕಟ್ಟಡಗಳು ಉರುಳಿಬಿದ್ದಿವೆ. ಅದರಡಿ ಸಿಲುಕಿದ ಜನರು ಕೂಗಾಟ, ಚೀರಾಟ ಕರುಳು ಹಿಂಡುತ್ತಿದೆ. ಇನ್ನಷ್ಟು ಕಟ್ಟಡಗಳು ಅಪಾಯಕಾರಿ ಮಟ್ಟದಲ್ಲಿ ವಾಲಿಕೊಂಡಿದ್ದು, ಬೀಳುವ ಹಂತದಲ್ಲಿವೆ. ಸಿರಿಯಾದ ರಾಜಧಾನಿಯಿಂದ ಸುಮಾರು 90 ಕಿಲೋಮೀಟರ್ ದೂರವಿರುವ ಗಾಜಿಯಾಂಟೆಪ್ ನಗರದ ಉತ್ತರದಲ್ಲಿ ಭೂಕಂಪನದ ಅಲೆಗಳು ಎದ್ದಿವೆ.

ಭೂಕಂಪದಲ್ಲಿ ಉರುಳಿ ಬಿದ್ದ ಕಟ್ಟಡಗಳುಇದು ಸುತ್ತಲಿನ 30 ಕಿಮೀ ವ್ಯಾಪ್ತಿಯಲ್ಲಿ ನಡುಕ ಉಂಟು ಮಾಡಿದೆ. ಹಲವಾರು ನಗರಗಳ ಜೊತೆಗೆ ಸಿರಿಯಾ ಯುದ್ಧದಲ್ಲಿ ವಲಸೆ ಬಂದು ನೆಲೆಸಿರುವ ನಿರಾಶ್ರಿತ ಪ್ರದೇಶದಲ್ಲೂ ಪ್ರಕೃತಿ ಮುನಿಸಿಕೊಂಡು ವೈಪರೀತ್ಯ ಸೃಷ್ಟಿಸಿದೆ. ಸಿರಿಯಾದ ಗಡಿಯಲ್ಲಿರುವ ಟರ್ಕಿ ವಿಶ್ವದಲ್ಲೇ ಅತಿ ಹೆಚ್ಚು ಸಂಖ್ಯೆಯ ಸಿರಿಯನ್ ನಿರಾಶ್ರಿತರನ್ನು ಹೊಂದಿದೆ.

andolanait

Recent Posts

ಕಾಡುಹಂದಿ ಬೇಟೆಗಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಸಿಡಿಮದ್ದು ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌…

33 mins ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

45 mins ago

ಓದುಗರ ಪತ್ರ:  ಗಂಗೋತ್ರಿ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಬೇಕಿದೆ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…

47 mins ago

ಓದುಗರ ಪತ್ರ: ಪ್ರೇಕ್ಷಣೀಯ ಸ್ಥಳಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಇರಲಿ

ಮೈಸೂರಿನ ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿದ್ದಾರೆ. ಅರಮನೆ ವೀಕ್ಷಣೆಗೆ ಹೆಚ್ಚಿನ ಜನರು ಸೇರುತ್ತಾರೆ. ಕ್ರಿಸ್‌ಮಸ್…

49 mins ago

ಓದುಗರ ಪತ್ರ: ಕುವೆಂಪುನಗರ ಮಾರ್ಗಕ್ಕೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ…

51 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ನಿತಿನ್ ನೇಮಕ: ಬಿಜೆಪಿ ಹಿಡಿತ ಮೋದಿ, ಶಾ ಕೈಯಲ್ಲೇ

ಯಶಸ್ವಿ ರಾಜಕೀಯ ನಾಯಕತ್ವಕ್ಕೆ ಈಗ ಬೇಕಾಗಿರುವುದು ವರ್ಚಸ್ಸು ಮತ್ತು ಜನಪ್ರಿಯತೆ. ಈ ಗುಣಗಳಿದ್ದರೆ ಸರ್ಕಾರ ಮತ್ತು ಪಕ್ಷದಲ್ಲಿ ಏನು ಬೇಕಾದರೂ…

1 hour ago