ದೇಶ- ವಿದೇಶ

ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪ : 360 ಕ್ಕೂ ಹೆಚ್ಚು ಮಂದಿ ಸಾವು

ಅಂಕಾರಾ: ಟರ್ಕಿ ಮತ್ತು ಸಿರಿಯಾದಲ್ಲಿ ಪ್ರಕೃತಿ ತಾಂಡವವಾಡಿದೆ. ಇಂದು ಮುಂಜಾನೆ ಸಂಭವಿಸಿದ ಪ್ರಬಲ ಭೂಕಂಪನಕ್ಕೆ ಉಭಯ ರಾಷ್ಟ್ರಗಳು ತತ್ತರಿಸಿ ಹೋಗಿವೆ. 7.8 ತೀವ್ರತೆಯ ಭೂಕಂಪನದಲ್ಲಿ 360 ಕ್ಕೂ ಅಧಿಕ ಜನರು ಈವರೆಗೂ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ನೂರಾರು ಕಟ್ಟಡಗಳು ಧರಾಶಾಯಿಯಾಗಿದ್ದು, ಜನರು ಅವಶೇಷಗಳಡಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಭೀಕರ ದುರಂತದ ದೃಶ್ಯಟರ್ಕಿ, ಸಿರಿಯಾ ಮಾತ್ರವಲ್ಲದೇ, ಈಜಿಪ್ಟ್​​ನ ಕೈರೋದವರೆಗೂ ಭೂಕಂಪನ ಅನುಭವವಾಗಿದೆ. ಭೂಮಿ ನಡುಕದಿಂದ ದೊಡ್ಡ ದೊಡ್ಡ ಕಟ್ಟಡಗಳು ಉರುಳಿಬಿದ್ದಿವೆ. ಅದರಡಿ ಸಿಲುಕಿದ ಜನರು ಕೂಗಾಟ, ಚೀರಾಟ ಕರುಳು ಹಿಂಡುತ್ತಿದೆ. ಇನ್ನಷ್ಟು ಕಟ್ಟಡಗಳು ಅಪಾಯಕಾರಿ ಮಟ್ಟದಲ್ಲಿ ವಾಲಿಕೊಂಡಿದ್ದು, ಬೀಳುವ ಹಂತದಲ್ಲಿವೆ. ಸಿರಿಯಾದ ರಾಜಧಾನಿಯಿಂದ ಸುಮಾರು 90 ಕಿಲೋಮೀಟರ್ ದೂರವಿರುವ ಗಾಜಿಯಾಂಟೆಪ್ ನಗರದ ಉತ್ತರದಲ್ಲಿ ಭೂಕಂಪನದ ಅಲೆಗಳು ಎದ್ದಿವೆ.

ಭೂಕಂಪದಲ್ಲಿ ಉರುಳಿ ಬಿದ್ದ ಕಟ್ಟಡಗಳುಇದು ಸುತ್ತಲಿನ 30 ಕಿಮೀ ವ್ಯಾಪ್ತಿಯಲ್ಲಿ ನಡುಕ ಉಂಟು ಮಾಡಿದೆ. ಹಲವಾರು ನಗರಗಳ ಜೊತೆಗೆ ಸಿರಿಯಾ ಯುದ್ಧದಲ್ಲಿ ವಲಸೆ ಬಂದು ನೆಲೆಸಿರುವ ನಿರಾಶ್ರಿತ ಪ್ರದೇಶದಲ್ಲೂ ಪ್ರಕೃತಿ ಮುನಿಸಿಕೊಂಡು ವೈಪರೀತ್ಯ ಸೃಷ್ಟಿಸಿದೆ. ಸಿರಿಯಾದ ಗಡಿಯಲ್ಲಿರುವ ಟರ್ಕಿ ವಿಶ್ವದಲ್ಲೇ ಅತಿ ಹೆಚ್ಚು ಸಂಖ್ಯೆಯ ಸಿರಿಯನ್ ನಿರಾಶ್ರಿತರನ್ನು ಹೊಂದಿದೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago