ಶ್ರೀನಗರ: ಜಮ್ಮ-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಸಿಎಂ ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಸಿಎಂ ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಬೇಕಾಗಿದೆ ಎಂದರು.
ಕಳೆದ 2019ರ ಆಗಸ್ಟ್.5ರಂದು ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿತು.
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ರಾಜ್ಯ ಸ್ಥಾನವನ್ನು ಮರುಸ್ಥಾಪಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರದ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದರು.
ಎರಡೂ ಚುನಾವಣೆಗಳಲ್ಲೂ ಜನರು ಯಾವುದೇ ಭಯವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ.
ಈಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಚುನಾವಣೆಗಳನ್ನು ಮುಗಿಸಿ ವಿರಾಮವಾಗಿದ್ದಾರೆ. ಮುಂದಿನ ದಿನಗಳಲ್ಲಿ ಅವರೊಂದಿಗೆ ಮಾತನಾಡುತ್ತೇನೆ. ಇದರಿಂದ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ತರಲಾಗುವುದು ಎಂಬ ವಿಶ್ವಾಸ ನನಗಿದೆ ಎಂದರು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…