ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ 2024ರ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ್ದನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮುಖ್ಯಸ್ಥ ಸುಬೋದ್ ಕುಮಾರ್ ತಳ್ಳಿಹಾಕಿದ್ದಾರೆ.
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಪರೀಕ್ಷಾ ಸಂಸ್ಥೆಯು ಸಮಗ್ರವಾಗಿ ವಿಶ್ಲೇಷಣೆ ಮಾಡಿದ್ದು, ನೀಟ್ ಪರೀಕ್ಷೆಯಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಪಾರದರ್ಶಕವಾಗಿ ಮಾಡಿದ್ದು, ವೈದ್ಯಕೀಯ ಪರೀಕ್ಷೆಯ ಸಮಗ್ರತೆಗೆ ದೇಶದಲ್ಲಿ ಎಲ್ಲಿಯೂ ರಾಜೀಯಾಗಿಲ್ಲ ಎಂದು ಅವರು ಹೇಳಿದರು.
ಈ ಸಂಬಂದ ಪಿಐಬಿ ಟ್ವೀಟ್ ಮಾಡಿದ್ದು, ನೀಟ್ ಪರೀಕ್ಷೆಯ ವಿಷಯವು 6 ಕೇಂದ್ರಗಳು ಮತ್ತು 1600 ಅಭ್ಯರ್ಥಿಗಳಿಗೆ ಸಂಬಂಧಿಸಿದೆ. ನಾವು ತಜ್ಞರ ಸಮಿತಿಯನ್ನು ರಚಿಸಿ, ಸಮಸ್ಯೆಯನ್ನು ವಿಶ್ಲೇಷಿಸಿದ್ದೇವೆ ಮತ್ತು ಕುಂದುಕೊರತೆಗಳನ್ನು ಪರಿಹರಿಸಿದ್ದೇವೆ
ವಿಶೇಷವಾಗಿ 1600 ಅಭ್ಯರ್ಥಿಗಳು ಮತ್ತು ಇತರ 23 ಲಕ್ಷ ಅಭ್ಯರ್ಥಿಗಳ ಭಯವನ್ನು ಹೋಗಲಾಡಿಸಲು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಉನ್ನತ ಅಧಿಕಾರದ ಸಮಿತಿಯು ಕುಂದುಕೊರತೆ ಪರಿಹಾರ ಸಮಿತಿಯ ಶಿಫಾರಸುಗಳನ್ನು ವಿಶ್ಲೇಷಿಸಲು ನಿರ್ಧರಿಸಿದೆ. ಆ ಮೂಲಕ, ಎಲ್ಲಾ ಸಮಸ್ಯೆಗಳನ್ನು ಮತ್ತೊಮ್ಮೆ ಪರಿಹರಿಸಲು ಮುಂದಾಗಿದ್ದೇವೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮಹಾನಿರ್ದೇಶಕರಾದ ಸುಬೋಧ್ ಕುಮಾರ್ ಸಿಂಗ್ ಹೇಳಿದ್ದಾರೆ ಎಂದು ಬರೆದುಕೊಂಡಿದೆ.
ಆನೇಕಲ್: ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ…
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದಲ್ಲಿ…
ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…
ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ…
ಡಾ.ಎಂ.ಡಿ.ಉಮೇಶ ನೆಲ್ಸನ್ ಮಂಡೇಲಾರವರ ಮೇಲೆ ಗಾಂಧೀಜಿ ಅವರು ಆಳವಾದ ಪ್ರಭಾವವನ್ನು ಬೀರಿದ್ದರು. ಮುಖ್ಯವಾಗಿ ಅಹಿಂಸಾತ್ಮಕ ಪ್ರತಿರೋಧ ಮತ್ತು ಸತ್ಯಾಗ್ರಹದ ಮೂಲಕ…
ನಮ್ಮ ತಂದೆ ಪೋರ್ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…