ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ 2024ರ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ್ದನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮುಖ್ಯಸ್ಥ ಸುಬೋದ್ ಕುಮಾರ್ ತಳ್ಳಿಹಾಕಿದ್ದಾರೆ.
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಪರೀಕ್ಷಾ ಸಂಸ್ಥೆಯು ಸಮಗ್ರವಾಗಿ ವಿಶ್ಲೇಷಣೆ ಮಾಡಿದ್ದು, ನೀಟ್ ಪರೀಕ್ಷೆಯಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಪಾರದರ್ಶಕವಾಗಿ ಮಾಡಿದ್ದು, ವೈದ್ಯಕೀಯ ಪರೀಕ್ಷೆಯ ಸಮಗ್ರತೆಗೆ ದೇಶದಲ್ಲಿ ಎಲ್ಲಿಯೂ ರಾಜೀಯಾಗಿಲ್ಲ ಎಂದು ಅವರು ಹೇಳಿದರು.
ಈ ಸಂಬಂದ ಪಿಐಬಿ ಟ್ವೀಟ್ ಮಾಡಿದ್ದು, ನೀಟ್ ಪರೀಕ್ಷೆಯ ವಿಷಯವು 6 ಕೇಂದ್ರಗಳು ಮತ್ತು 1600 ಅಭ್ಯರ್ಥಿಗಳಿಗೆ ಸಂಬಂಧಿಸಿದೆ. ನಾವು ತಜ್ಞರ ಸಮಿತಿಯನ್ನು ರಚಿಸಿ, ಸಮಸ್ಯೆಯನ್ನು ವಿಶ್ಲೇಷಿಸಿದ್ದೇವೆ ಮತ್ತು ಕುಂದುಕೊರತೆಗಳನ್ನು ಪರಿಹರಿಸಿದ್ದೇವೆ
ವಿಶೇಷವಾಗಿ 1600 ಅಭ್ಯರ್ಥಿಗಳು ಮತ್ತು ಇತರ 23 ಲಕ್ಷ ಅಭ್ಯರ್ಥಿಗಳ ಭಯವನ್ನು ಹೋಗಲಾಡಿಸಲು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಉನ್ನತ ಅಧಿಕಾರದ ಸಮಿತಿಯು ಕುಂದುಕೊರತೆ ಪರಿಹಾರ ಸಮಿತಿಯ ಶಿಫಾರಸುಗಳನ್ನು ವಿಶ್ಲೇಷಿಸಲು ನಿರ್ಧರಿಸಿದೆ. ಆ ಮೂಲಕ, ಎಲ್ಲಾ ಸಮಸ್ಯೆಗಳನ್ನು ಮತ್ತೊಮ್ಮೆ ಪರಿಹರಿಸಲು ಮುಂದಾಗಿದ್ದೇವೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮಹಾನಿರ್ದೇಶಕರಾದ ಸುಬೋಧ್ ಕುಮಾರ್ ಸಿಂಗ್ ಹೇಳಿದ್ದಾರೆ ಎಂದು ಬರೆದುಕೊಂಡಿದೆ.
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…