ದೇಶ- ವಿದೇಶ

ನೀಟ್‌ ಪರೀಕ್ಷೆಯಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: ಸುಬೋದ್ ಕುಮಾರ್‌

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ 2024ರ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿದ್ದನ್ನು ನ್ಯಾಷನಲ್‌ ಟೆಸ್ಟಿಂಗ್‌ ಏಜೆನ್ಸಿ ಮುಖ್ಯಸ್ಥ ಸುಬೋದ್‌ ಕುಮಾರ್‌ ತಳ್ಳಿಹಾಕಿದ್ದಾರೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಪರೀಕ್ಷಾ ಸಂಸ್ಥೆಯು ಸಮಗ್ರವಾಗಿ ವಿಶ್ಲೇಷಣೆ ಮಾಡಿದ್ದು, ನೀಟ್‌ ಪರೀಕ್ಷೆಯಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಪಾರದರ್ಶಕವಾಗಿ ಮಾಡಿದ್ದು, ವೈದ್ಯಕೀಯ ಪರೀಕ್ಷೆಯ ಸಮಗ್ರತೆಗೆ ದೇಶದಲ್ಲಿ ಎಲ್ಲಿಯೂ ರಾಜೀಯಾಗಿಲ್ಲ ಎಂದು ಅವರು ಹೇಳಿದರು.

ಈ ಸಂಬಂದ ಪಿಐಬಿ ಟ್ವೀಟ್‌ ಮಾಡಿದ್ದು, ನೀಟ್ ಪರೀಕ್ಷೆಯ ವಿಷಯವು 6 ಕೇಂದ್ರಗಳು ಮತ್ತು 1600 ಅಭ್ಯರ್ಥಿಗಳಿಗೆ ಸಂಬಂಧಿಸಿದೆ. ನಾವು ತಜ್ಞರ ಸಮಿತಿಯನ್ನು ರಚಿಸಿ, ಸಮಸ್ಯೆಯನ್ನು ವಿಶ್ಲೇಷಿಸಿದ್ದೇವೆ ಮತ್ತು ಕುಂದುಕೊರತೆಗಳನ್ನು ಪರಿಹರಿಸಿದ್ದೇವೆ

ವಿಶೇಷವಾಗಿ 1600 ಅಭ್ಯರ್ಥಿಗಳು ಮತ್ತು ಇತರ 23 ಲಕ್ಷ ಅಭ್ಯರ್ಥಿಗಳ ಭಯವನ್ನು ಹೋಗಲಾಡಿಸಲು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಉನ್ನತ ಅಧಿಕಾರದ ಸಮಿತಿಯು ಕುಂದುಕೊರತೆ ಪರಿಹಾರ ಸಮಿತಿಯ ಶಿಫಾರಸುಗಳನ್ನು ವಿಶ್ಲೇಷಿಸಲು ನಿರ್ಧರಿಸಿದೆ. ಆ ಮೂಲಕ, ಎಲ್ಲಾ ಸಮಸ್ಯೆಗಳನ್ನು ಮತ್ತೊಮ್ಮೆ ಪರಿಹರಿಸಲು ಮುಂದಾಗಿದ್ದೇವೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮಹಾನಿರ್ದೇಶಕರಾದ ಸುಬೋಧ್ ಕುಮಾರ್ ಸಿಂಗ್ ಹೇಳಿದ್ದಾರೆ ಎಂದು ಬರೆದುಕೊಂಡಿದೆ.

https://x.com/PIB_India/status/1799375799436640303

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

3 mins ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

6 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

8 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

11 mins ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

20 mins ago