ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ಸ್ಪಾಡೆಕ್ಸ್ ಮಿಷನ್ ಉಡಾವಣೆ ಮಾಡುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸ್ಪಾಡೆಕ್ಸ್ ಉಡಾವಣೆಯ ಪ್ರಯೋಗ ಒಂದು ವೇಳೆ ಯಶಸ್ವಿಯಾದರೆ ಆಯ್ದ ದೇಶಗಳ ಸಾಲಿನಲ್ಲಿ ಭಾರತ ಕೂಡ ನಿಂತು ಬೀಗಲಿದೆ.
ಆಂಧ್ರಪ್ರದೇಶದ ಶ್ರೀ ಹರಿಕೋಟಾದಿಂದ ಕಳೆದ ತಡರಾತ್ರಿ 10 ಗಂಟೆಯ ವೇಳೆಗೆ ಪಿಎಸ್ಎಲ್ವಿ ರಾಕೆಟ್ ಮೂಲಕ ಸ್ಪಾಡೆಕ್ಸ್ ಮಿಷನ್ ಉಡಾವಣೆ ಮಾಡಲಾಗಿದೆ. ಈ ಮಿಷನ್ ಭಾರತದ ಬಾಹ್ಯಾಕಾಶ ಕಾರ್ಯಾಚರಣೆಯಲ್ಲಿ ಒಂದು ಮೈಲಿಗಲ್ಲು ಎಂದು ಇಸ್ರೋ ಸಂತಸ ವ್ಯಕ್ತಪಡಿಸಿದೆ.
ಈ ಕಾರ್ಯಾಚರಣೆಯಲ್ಲಿ ಎರಡು ಉಪಗ್ರಹಗಳನ್ನು ಬಾಹ್ಯಾಕಾಶದಲ್ಲಿ ಪರಸ್ಪರ ಜೋಡಿಸಲಾಗುತ್ತದೆ ಮತ್ತು ಬೇರ್ಪಡಿಸಲಾಗುತ್ತದೆ. ಒಂದು ವೇಳೆ ಈ ಮಿಷನ್ ಯಶಸ್ವಿಯಾದರೆ ಚಂದ್ರಯಾನ-4, ತನ್ನದೇ ಆದ ಬಾಹ್ಯಾಕಾಶ ನಿಲ್ದಾಣ ಮತ್ತು ಚಂದ್ರನ ಮೇಲೆ ಭಾರತೀಯ ಪ್ರಯಾಣಿಕನನ್ನು ಇರಿಸುವ ಭಾರತದ ಕನಸುಗಳನ್ನು ಈಡೇರಿಸುತ್ತದೆ ಎಂದು ಇಸ್ರೋ ತಿಳಿಸಿದೆ.
PSLV ರಾಕೆಟ್ ಬಾಹ್ಯಾಕಾಶ ನೌಕೆ A (SDX01) ಮತ್ತು ಸ್ಪೇಸ್ ಕ್ರಾಫ್ಟ್ B (SDX02) ಕಕ್ಷೆಯಲ್ಲಿ ಅವುಗಳನ್ನು ಐದು ಕಿಲೋಮೀಟರ್ ದೂರದಲ್ಲಿ ಇರಿಸುತ್ತದೆ. ನಂತರ ಇಸ್ರೋದ ವಿಜ್ಞಾನಿಗಳು ಅವುಗಳನ್ನು ಮೂರು ಮೀಟರ್ ಹತ್ತಿರ ತರಲು ಪ್ರಯತ್ನಿಸುತ್ತಾರೆ. ನಂತರ ಭೂಮಿಯಿಂದ ಸುಮಾರು 470 ಕಿಲೋಮೀಟರ್ ಎತ್ತರದಲ್ಲಿ ಒಂದಾಗಿ ವಿಲೀನಗೊಳಿಸುತ್ತಾರೆ. ಈ ಪ್ರಕ್ರಿಯೆಯನ್ನು ಡಾಕಿಂಗ್ ಎಂದು ಕರೆಯಲಾಗುತ್ತದೆ. ಈ ಎರಡೂ ಉಪಗ್ರಹಗಳನ್ನು ಬೇರ್ಪಡಿಸುವ ಕ್ರಿಯೆ ಆಗುತ್ತದೆ ಇದಕ್ಕೆ ಅನ್ಡಾಕಿಂಗ್ ಎಂದು ಕರೆಯಲಾಗುತ್ತದೆ.
ಈ ಮಿಷನ್ ಭವಿಷ್ಯದ ಮಾನವ ಸಹಿತ ಬಾಹ್ಯಾಕಾಶ ಕಾರ್ಯಾಚರಣೆಗಳು ಮತ್ತು ಉಪಗ್ರಹ ಸೇವಾ ಕಾರ್ಯಾಚರಣೆಗಳಿಗೆ ನಿರ್ಣಾಯಕ ತಂತ್ರಜ್ಞಾನವಾಗಿದೆ. ಈ ಹಿಂದೆ ಅಮೆರಿಕಾ, ಚೀನಾ ಹಾಗೂ ರಷ್ಯಾ ಮಾತ್ರ ಈ ಸಾಧನೆ ಮಾಡಿವೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…