ದೇಶ- ವಿದೇಶ

ಸ್ಪಾಡೆಕ್ಸ್‌ ಮಿಷನ್‌ ಯಶಸ್ವಿ ಉಡಾವಣೆ: ಇತಿಹಾಸ ಸೃಷ್ಟಿಸಿದ ಇಸ್ರೋ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ಸ್ಪಾಡೆಕ್ಸ್‌ ಮಿಷನ್‌ ಉಡಾವಣೆ ಮಾಡುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸ್ಪಾಡೆಕ್ಸ್‌ ಉಡಾವಣೆಯ ಪ್ರಯೋಗ ಒಂದು ವೇಳೆ ಯಶಸ್ವಿಯಾದರೆ ಆಯ್ದ ದೇಶಗಳ ಸಾಲಿನಲ್ಲಿ ಭಾರತ ಕೂಡ ನಿಂತು ಬೀಗಲಿದೆ.

ಆಂಧ್ರಪ್ರದೇಶದ ಶ್ರೀ ಹರಿಕೋಟಾದಿಂದ ಕಳೆದ ತಡರಾತ್ರಿ 10 ಗಂಟೆಯ ವೇಳೆಗೆ ಪಿಎಸ್‌ಎಲ್‌ವಿ ರಾಕೆಟ್‌ ಮೂಲಕ ಸ್ಪಾಡೆಕ್ಸ್‌ ಮಿಷನ್‌ ಉಡಾವಣೆ ಮಾಡಲಾಗಿದೆ. ಈ ಮಿಷನ್‌ ಭಾರತದ ಬಾಹ್ಯಾಕಾಶ ಕಾರ್ಯಾಚರಣೆಯಲ್ಲಿ ಒಂದು ಮೈಲಿಗಲ್ಲು ಎಂದು ಇಸ್ರೋ ಸಂತಸ ವ್ಯಕ್ತಪಡಿಸಿದೆ.

ಈ ಕಾರ್ಯಾಚರಣೆಯಲ್ಲಿ ಎರಡು ಉಪಗ್ರಹಗಳನ್ನು ಬಾಹ್ಯಾಕಾಶದಲ್ಲಿ ಪರಸ್ಪರ ಜೋಡಿಸಲಾಗುತ್ತದೆ ಮತ್ತು ಬೇರ್ಪಡಿಸಲಾಗುತ್ತದೆ. ಒಂದು ವೇಳೆ ಈ ಮಿಷನ್‌ ಯಶಸ್ವಿಯಾದರೆ ಚಂದ್ರಯಾನ-4, ತನ್ನದೇ ಆದ ಬಾಹ್ಯಾಕಾಶ ನಿಲ್ದಾಣ ಮತ್ತು ಚಂದ್ರನ ಮೇಲೆ ಭಾರತೀಯ ಪ್ರಯಾಣಿಕನನ್ನು ಇರಿಸುವ ಭಾರತದ ಕನಸುಗಳನ್ನು ಈಡೇರಿಸುತ್ತದೆ ಎಂದು ಇಸ್ರೋ ತಿಳಿಸಿದೆ.

PSLV ರಾಕೆಟ್‌ ಬಾಹ್ಯಾಕಾಶ ನೌಕೆ A (SDX01) ಮತ್ತು ಸ್ಪೇಸ್‌ ಕ್ರಾಫ್ಟ್‌ B (SDX02) ಕಕ್ಷೆಯಲ್ಲಿ ಅವುಗಳನ್ನು ಐದು ಕಿಲೋಮೀಟರ್‌ ದೂರದಲ್ಲಿ ಇರಿಸುತ್ತದೆ. ನಂತರ ಇಸ್ರೋದ ವಿಜ್ಞಾನಿಗಳು ಅವುಗಳನ್ನು ಮೂರು ಮೀಟರ್‌ ಹತ್ತಿರ ತರಲು ಪ್ರಯತ್ನಿಸುತ್ತಾರೆ. ನಂತರ ಭೂಮಿಯಿಂದ ಸುಮಾರು 470 ಕಿಲೋಮೀಟರ್‌ ಎತ್ತರದಲ್ಲಿ ಒಂದಾಗಿ ವಿಲೀನಗೊಳಿಸುತ್ತಾರೆ. ಈ ಪ್ರಕ್ರಿಯೆಯನ್ನು ಡಾಕಿಂಗ್‌ ಎಂದು ಕರೆಯಲಾಗುತ್ತದೆ. ಈ ಎರಡೂ ಉಪಗ್ರಹಗಳನ್ನು ಬೇರ್ಪಡಿಸುವ ಕ್ರಿಯೆ ಆಗುತ್ತದೆ ಇದಕ್ಕೆ ಅನ್‌ಡಾಕಿಂಗ್‌ ಎಂದು ಕರೆಯಲಾಗುತ್ತದೆ.

ಈ ಮಿಷನ್‌ ಭವಿಷ್ಯದ ಮಾನವ ಸಹಿತ ಬಾಹ್ಯಾಕಾಶ ಕಾರ್ಯಾಚರಣೆಗಳು ಮತ್ತು ಉಪಗ್ರಹ ಸೇವಾ ಕಾರ್ಯಾಚರಣೆಗಳಿಗೆ ನಿರ್ಣಾಯಕ ತಂತ್ರಜ್ಞಾನವಾಗಿದೆ. ಈ ಹಿಂದೆ ಅಮೆರಿಕಾ, ಚೀನಾ ಹಾಗೂ ರಷ್ಯಾ ಮಾತ್ರ ಈ ಸಾಧನೆ ಮಾಡಿವೆ.

 

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

40 mins ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

44 mins ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

49 mins ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

1 hour ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

1 hour ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago