ದೇಶ- ವಿದೇಶ

ಸ್ಪಾಡೆಕ್ಸ್‌ ಮಿಷನ್‌ ಯಶಸ್ವಿ ಉಡಾವಣೆ: ಇತಿಹಾಸ ಸೃಷ್ಟಿಸಿದ ಇಸ್ರೋ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ಸ್ಪಾಡೆಕ್ಸ್‌ ಮಿಷನ್‌ ಉಡಾವಣೆ ಮಾಡುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸ್ಪಾಡೆಕ್ಸ್‌ ಉಡಾವಣೆಯ ಪ್ರಯೋಗ ಒಂದು ವೇಳೆ ಯಶಸ್ವಿಯಾದರೆ ಆಯ್ದ ದೇಶಗಳ ಸಾಲಿನಲ್ಲಿ ಭಾರತ ಕೂಡ ನಿಂತು ಬೀಗಲಿದೆ.

ಆಂಧ್ರಪ್ರದೇಶದ ಶ್ರೀ ಹರಿಕೋಟಾದಿಂದ ಕಳೆದ ತಡರಾತ್ರಿ 10 ಗಂಟೆಯ ವೇಳೆಗೆ ಪಿಎಸ್‌ಎಲ್‌ವಿ ರಾಕೆಟ್‌ ಮೂಲಕ ಸ್ಪಾಡೆಕ್ಸ್‌ ಮಿಷನ್‌ ಉಡಾವಣೆ ಮಾಡಲಾಗಿದೆ. ಈ ಮಿಷನ್‌ ಭಾರತದ ಬಾಹ್ಯಾಕಾಶ ಕಾರ್ಯಾಚರಣೆಯಲ್ಲಿ ಒಂದು ಮೈಲಿಗಲ್ಲು ಎಂದು ಇಸ್ರೋ ಸಂತಸ ವ್ಯಕ್ತಪಡಿಸಿದೆ.

ಈ ಕಾರ್ಯಾಚರಣೆಯಲ್ಲಿ ಎರಡು ಉಪಗ್ರಹಗಳನ್ನು ಬಾಹ್ಯಾಕಾಶದಲ್ಲಿ ಪರಸ್ಪರ ಜೋಡಿಸಲಾಗುತ್ತದೆ ಮತ್ತು ಬೇರ್ಪಡಿಸಲಾಗುತ್ತದೆ. ಒಂದು ವೇಳೆ ಈ ಮಿಷನ್‌ ಯಶಸ್ವಿಯಾದರೆ ಚಂದ್ರಯಾನ-4, ತನ್ನದೇ ಆದ ಬಾಹ್ಯಾಕಾಶ ನಿಲ್ದಾಣ ಮತ್ತು ಚಂದ್ರನ ಮೇಲೆ ಭಾರತೀಯ ಪ್ರಯಾಣಿಕನನ್ನು ಇರಿಸುವ ಭಾರತದ ಕನಸುಗಳನ್ನು ಈಡೇರಿಸುತ್ತದೆ ಎಂದು ಇಸ್ರೋ ತಿಳಿಸಿದೆ.

PSLV ರಾಕೆಟ್‌ ಬಾಹ್ಯಾಕಾಶ ನೌಕೆ A (SDX01) ಮತ್ತು ಸ್ಪೇಸ್‌ ಕ್ರಾಫ್ಟ್‌ B (SDX02) ಕಕ್ಷೆಯಲ್ಲಿ ಅವುಗಳನ್ನು ಐದು ಕಿಲೋಮೀಟರ್‌ ದೂರದಲ್ಲಿ ಇರಿಸುತ್ತದೆ. ನಂತರ ಇಸ್ರೋದ ವಿಜ್ಞಾನಿಗಳು ಅವುಗಳನ್ನು ಮೂರು ಮೀಟರ್‌ ಹತ್ತಿರ ತರಲು ಪ್ರಯತ್ನಿಸುತ್ತಾರೆ. ನಂತರ ಭೂಮಿಯಿಂದ ಸುಮಾರು 470 ಕಿಲೋಮೀಟರ್‌ ಎತ್ತರದಲ್ಲಿ ಒಂದಾಗಿ ವಿಲೀನಗೊಳಿಸುತ್ತಾರೆ. ಈ ಪ್ರಕ್ರಿಯೆಯನ್ನು ಡಾಕಿಂಗ್‌ ಎಂದು ಕರೆಯಲಾಗುತ್ತದೆ. ಈ ಎರಡೂ ಉಪಗ್ರಹಗಳನ್ನು ಬೇರ್ಪಡಿಸುವ ಕ್ರಿಯೆ ಆಗುತ್ತದೆ ಇದಕ್ಕೆ ಅನ್‌ಡಾಕಿಂಗ್‌ ಎಂದು ಕರೆಯಲಾಗುತ್ತದೆ.

ಈ ಮಿಷನ್‌ ಭವಿಷ್ಯದ ಮಾನವ ಸಹಿತ ಬಾಹ್ಯಾಕಾಶ ಕಾರ್ಯಾಚರಣೆಗಳು ಮತ್ತು ಉಪಗ್ರಹ ಸೇವಾ ಕಾರ್ಯಾಚರಣೆಗಳಿಗೆ ನಿರ್ಣಾಯಕ ತಂತ್ರಜ್ಞಾನವಾಗಿದೆ. ಈ ಹಿಂದೆ ಅಮೆರಿಕಾ, ಚೀನಾ ಹಾಗೂ ರಷ್ಯಾ ಮಾತ್ರ ಈ ಸಾಧನೆ ಮಾಡಿವೆ.

 

ಆಂದೋಲನ ಡೆಸ್ಕ್

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

2 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

2 hours ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

2 hours ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

2 hours ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

2 hours ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

2 hours ago