ದೇಶ- ವಿದೇಶ

ಸ್ಪಾಡೆಕ್ಸ್‌ ಮಿಷನ್‌ ಯಶಸ್ವಿ ಉಡಾವಣೆ: ಇತಿಹಾಸ ಸೃಷ್ಟಿಸಿದ ಇಸ್ರೋ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ಸ್ಪಾಡೆಕ್ಸ್‌ ಮಿಷನ್‌ ಉಡಾವಣೆ ಮಾಡುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸ್ಪಾಡೆಕ್ಸ್‌ ಉಡಾವಣೆಯ ಪ್ರಯೋಗ ಒಂದು ವೇಳೆ ಯಶಸ್ವಿಯಾದರೆ ಆಯ್ದ ದೇಶಗಳ ಸಾಲಿನಲ್ಲಿ ಭಾರತ ಕೂಡ ನಿಂತು ಬೀಗಲಿದೆ.

ಆಂಧ್ರಪ್ರದೇಶದ ಶ್ರೀ ಹರಿಕೋಟಾದಿಂದ ಕಳೆದ ತಡರಾತ್ರಿ 10 ಗಂಟೆಯ ವೇಳೆಗೆ ಪಿಎಸ್‌ಎಲ್‌ವಿ ರಾಕೆಟ್‌ ಮೂಲಕ ಸ್ಪಾಡೆಕ್ಸ್‌ ಮಿಷನ್‌ ಉಡಾವಣೆ ಮಾಡಲಾಗಿದೆ. ಈ ಮಿಷನ್‌ ಭಾರತದ ಬಾಹ್ಯಾಕಾಶ ಕಾರ್ಯಾಚರಣೆಯಲ್ಲಿ ಒಂದು ಮೈಲಿಗಲ್ಲು ಎಂದು ಇಸ್ರೋ ಸಂತಸ ವ್ಯಕ್ತಪಡಿಸಿದೆ.

ಈ ಕಾರ್ಯಾಚರಣೆಯಲ್ಲಿ ಎರಡು ಉಪಗ್ರಹಗಳನ್ನು ಬಾಹ್ಯಾಕಾಶದಲ್ಲಿ ಪರಸ್ಪರ ಜೋಡಿಸಲಾಗುತ್ತದೆ ಮತ್ತು ಬೇರ್ಪಡಿಸಲಾಗುತ್ತದೆ. ಒಂದು ವೇಳೆ ಈ ಮಿಷನ್‌ ಯಶಸ್ವಿಯಾದರೆ ಚಂದ್ರಯಾನ-4, ತನ್ನದೇ ಆದ ಬಾಹ್ಯಾಕಾಶ ನಿಲ್ದಾಣ ಮತ್ತು ಚಂದ್ರನ ಮೇಲೆ ಭಾರತೀಯ ಪ್ರಯಾಣಿಕನನ್ನು ಇರಿಸುವ ಭಾರತದ ಕನಸುಗಳನ್ನು ಈಡೇರಿಸುತ್ತದೆ ಎಂದು ಇಸ್ರೋ ತಿಳಿಸಿದೆ.

PSLV ರಾಕೆಟ್‌ ಬಾಹ್ಯಾಕಾಶ ನೌಕೆ A (SDX01) ಮತ್ತು ಸ್ಪೇಸ್‌ ಕ್ರಾಫ್ಟ್‌ B (SDX02) ಕಕ್ಷೆಯಲ್ಲಿ ಅವುಗಳನ್ನು ಐದು ಕಿಲೋಮೀಟರ್‌ ದೂರದಲ್ಲಿ ಇರಿಸುತ್ತದೆ. ನಂತರ ಇಸ್ರೋದ ವಿಜ್ಞಾನಿಗಳು ಅವುಗಳನ್ನು ಮೂರು ಮೀಟರ್‌ ಹತ್ತಿರ ತರಲು ಪ್ರಯತ್ನಿಸುತ್ತಾರೆ. ನಂತರ ಭೂಮಿಯಿಂದ ಸುಮಾರು 470 ಕಿಲೋಮೀಟರ್‌ ಎತ್ತರದಲ್ಲಿ ಒಂದಾಗಿ ವಿಲೀನಗೊಳಿಸುತ್ತಾರೆ. ಈ ಪ್ರಕ್ರಿಯೆಯನ್ನು ಡಾಕಿಂಗ್‌ ಎಂದು ಕರೆಯಲಾಗುತ್ತದೆ. ಈ ಎರಡೂ ಉಪಗ್ರಹಗಳನ್ನು ಬೇರ್ಪಡಿಸುವ ಕ್ರಿಯೆ ಆಗುತ್ತದೆ ಇದಕ್ಕೆ ಅನ್‌ಡಾಕಿಂಗ್‌ ಎಂದು ಕರೆಯಲಾಗುತ್ತದೆ.

ಈ ಮಿಷನ್‌ ಭವಿಷ್ಯದ ಮಾನವ ಸಹಿತ ಬಾಹ್ಯಾಕಾಶ ಕಾರ್ಯಾಚರಣೆಗಳು ಮತ್ತು ಉಪಗ್ರಹ ಸೇವಾ ಕಾರ್ಯಾಚರಣೆಗಳಿಗೆ ನಿರ್ಣಾಯಕ ತಂತ್ರಜ್ಞಾನವಾಗಿದೆ. ಈ ಹಿಂದೆ ಅಮೆರಿಕಾ, ಚೀನಾ ಹಾಗೂ ರಷ್ಯಾ ಮಾತ್ರ ಈ ಸಾಧನೆ ಮಾಡಿವೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

7 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

7 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

7 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

7 hours ago