ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್ಪಿಜಿ ಪೂರೈಕೆಯನ್ನು ಶೇ.70ರಷ್ಟಕ್ಕೆ ಏರಿಸಿದೆ.
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿದ ಪತ್ರದಲ್ಲಿ, ಹಿಂದಿನ ಶೇ.50ರ ಹಂಚಿಕೆಗೆ ಹೆಚ್ಚುವರಿಯಾಗಿ ಶೇ.20ರ ಹಂಚಿಕೆಯನ್ನು ಮಂಜೂರು ಮಾಡಿದೆ ಎಂದು ತಿಳಿಸಿದೆ.
ಇನ್ನೂ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜಂಟಿ ಕಾರ್ಯದರ್ಶಿ ಸುಜಾತ ಶರ್ಮಾ, ದೇಶದಲ್ಲಿ ಪ್ರಸ್ತುತ ಸೂಕ್ತ ರೀತಿಯಲ್ಲಿ ಕಚ್ಚಾ ತೈಲ ನಿರ್ವಹಣೆ ಮಾಡಲಾಗುತ್ತಿದೆ. ಮುಂದಿನ ಎರಡೂ ಮೂರು ತಿಂಗಳಿಗೆ ಆಗುವಷ್ಟು ಇಂಧನ ದಾಸ್ತಾನು ಇದೆ. ಜತೆಗೆ ದೇಶೀಯ ಎಲ್ಪಿಜಿ ಉತ್ಪಾದನೆಯು ಸಹ ಹೆಚ್ಚಾಗಿದೆ ಎಂದಿದ್ದಾರೆ.
ಪಶ್ಚಿಮ ಸಂಘರ್ಷದದಿಂದ ಉಂಟಾಗಿರುವ ಪರಿಣಾಮವನ್ನು ಪ್ರಸ್ತಾಪಿಸಿದ ಅವರು, ಕಚ್ಚಾತೈಲ, ಎಲ್ಪಿಜಿ ಮತ್ತು ಎಲ್ಎನ್ಜಿ ಪೂರೈಕೆಗಳ ಮೇಲೆ ಪರಿಣಾಮ ಬೀರಿದೆ. ಜತೆಗೆ ಜಾಗತಿಕ ಬೆಲೆಯಲ್ಲಿ ಹೆಚ್ಚಳವು ಆಗಿದೆ ಎಂದರು.
ಭಾರತ ಶೇ.90 ರಷ್ಟು ಎಲ್ಪಿಜಿಯನ್ನು ಹಾರ್ಮುಜ್ ಜಲಸಂಧಿಯ ಮೂಲಕ ಆಮದು ಮಾಡಿಕೊಳ್ಳುತ್ತದೆ. ವಾಣಿಜ್ಯ ಎಲ್ಪಿಜಿ ಪೂರೈಕೆಯನ್ನು ತಾತ್ಕಾಲಿಕವಾಗಿ ಮೊಟಕುಗೊಳಿಸಲಾಗಿತ್ತು. ಬಳಿಕ ಹಂತ ಹಂತವಾಗಿ ಮರು ಸ್ಥಾಪಿಸಲಾಯಿತು. ಕ್ರಮೇಣ ಸರಬರಾಜನ್ನು ಶೇ.20 ರಿಂದ ಶೇ.70ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…