ಚಂಡೀಘಡ: ಶಿರೋಮಣಿ ಅಕಾಲಿದಳದ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿರುವ ಘಟನೆ ಅಮೃತಸರದ ಗೋಲ್ಡನ್ ಟೆಂಪಲ್ ಪ್ರದೇಶ ದ್ವಾರದಲ್ಲಿ ನಡೆದಿದೆ.
ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಜನರು ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಂಜಾಬ್ನ ಮಾಜಿ ಡಿಸಿಎಂ ಆಗಿರುವ ಸುಖ್ಬೀರ್ ಸಿಂಗ್ ಬಾದಲ್ ಅವರು ಸ್ವರ್ಣ ಮಂದಿರದ ಮುಂಭಾಗದಲ್ಲಿ ಸೇವಾದಾರನಾಗಿ ಕರ್ತವ್ಯ ನೇರವೇರಿಸಿದ್ದರು.
ಸೇವಾದಾರನ ಸಮವಸ್ತ್ರ ಧರಿಸಿದ್ದ ಸುಖ್ಬೀರ್ ಅವರು, ಕೈಯಲ್ಲಿ ಈಟಿ ಹಿಡಿದು ಸ್ವರ್ಣಮಂದಿರದ ಕಾವಲು ಕಾಯ್ದರು. ಕಾಲಿನ ಮೂಳಕೆ ಮುರಿದಿರುವ ಕಾರಣ, ಗಾಲಿ ಕುರ್ಚಿಯ ಮೇಲೆಯೇ ಕುಳಿತು ಶಿಕ್ಷೆ ಪೂರೈಸಿದ್ದರು. ಈ ವೇಲೆ ಬಾದಲ್ ಮೇಲೆ ದಾಳಿ ನಡೆಸಲಾಗಿದ್ದು, ಬಾದಲ್ ಸ್ವಲ್ಪದರಲ್ಲೇ ಪಾರಾಗಿ ಸುರಕ್ಷಿತವಾಗಿದ್ದಾರೆ. ಈ ಮಧ್ಯೆ ಭದ್ರತೆ ಒದಗಿಸಲು ಪಂಜಾಬ್ ಸರ್ಕಾರ ವಿಫಲವಾಗಿದೆ ಎಂದು ಎಸ್ಎಡಿ ಆರೋಪಿಸಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…