ಚಂಡೀಘಡ: ಶಿರೋಮಣಿ ಅಕಾಲಿದಳದ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿರುವ ಘಟನೆ ಅಮೃತಸರದ ಗೋಲ್ಡನ್ ಟೆಂಪಲ್ ಪ್ರದೇಶ ದ್ವಾರದಲ್ಲಿ ನಡೆದಿದೆ.
ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಜನರು ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಂಜಾಬ್ನ ಮಾಜಿ ಡಿಸಿಎಂ ಆಗಿರುವ ಸುಖ್ಬೀರ್ ಸಿಂಗ್ ಬಾದಲ್ ಅವರು ಸ್ವರ್ಣ ಮಂದಿರದ ಮುಂಭಾಗದಲ್ಲಿ ಸೇವಾದಾರನಾಗಿ ಕರ್ತವ್ಯ ನೇರವೇರಿಸಿದ್ದರು.
ಸೇವಾದಾರನ ಸಮವಸ್ತ್ರ ಧರಿಸಿದ್ದ ಸುಖ್ಬೀರ್ ಅವರು, ಕೈಯಲ್ಲಿ ಈಟಿ ಹಿಡಿದು ಸ್ವರ್ಣಮಂದಿರದ ಕಾವಲು ಕಾಯ್ದರು. ಕಾಲಿನ ಮೂಳಕೆ ಮುರಿದಿರುವ ಕಾರಣ, ಗಾಲಿ ಕುರ್ಚಿಯ ಮೇಲೆಯೇ ಕುಳಿತು ಶಿಕ್ಷೆ ಪೂರೈಸಿದ್ದರು. ಈ ವೇಲೆ ಬಾದಲ್ ಮೇಲೆ ದಾಳಿ ನಡೆಸಲಾಗಿದ್ದು, ಬಾದಲ್ ಸ್ವಲ್ಪದರಲ್ಲೇ ಪಾರಾಗಿ ಸುರಕ್ಷಿತವಾಗಿದ್ದಾರೆ. ಈ ಮಧ್ಯೆ ಭದ್ರತೆ ಒದಗಿಸಲು ಪಂಜಾಬ್ ಸರ್ಕಾರ ವಿಫಲವಾಗಿದೆ ಎಂದು ಎಸ್ಎಡಿ ಆರೋಪಿಸಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…