ನವದೆಹಲಿ: ಸುಲ್ಲಿ ಡೀಲ್ಸ್ ಮೊಬೈಲ್ ಅಪ್ಲಿಕೇಷನ್ ಮೂಲಕ ವಿವಿಧ ಗುಂಪುಗಳ ನಡುವೆ ದ್ವೇಷ ಪ್ರಚೋದನೆ ಮಾಡಿದ ಆರೋಪ ಎದುರಿಸುತ್ತಿದ್ದ ಓಂಕಾರೇಶ್ವರ್ ಠಾಕೂರ್ ಮನವಿಗೆ ಸಂಬಂಧಿಸಿದಂತೆ ಶುಕ್ರವಾರ ದೆಹಲಿ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯ ಸರ್ಕಾರಗಳು ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್ ಕೇಳಿದೆ.
ಸುಲ್ಲಿ ಡೀಲ್ಸ್ ಮತ್ತು ಬುಲ್ಲಿ ಬಾಯಿ ಎಂಬ ಎರಡು ಅಪ್ಲಿಕೇಷನ್ ರಚಿಸಿ ವಿಭಿನ್ನ ಕೃತ್ಯಗಳಿಗಾಗಿ ಬೇರೆ ಬೇರೆ ಸೆಕ್ಷನ್ಗಳಡಿ ಆರೋಪ ಹೊರಿಸಿರುವುದರಿಂದ ಅರ್ಜಿಯನ್ನು ಪುರಸ್ಕರಿಸಬಹುದೇ ಎಂದು ನ್ಯಾಯಾಲಯ ಅಚ್ಚರಿ ವ್ಯಕ್ತಪಡಿಸಿತು. ಎಲ್ಲಾ ಎಫ್ಐಆರ್ಗಳು ವಿಭಿನ್ನವಾಗಿವೆ ಎಂದು ಅದು ಹೇಳಿತು.
ಅಂತಿಮವಾಗಿ ನೋಟಿಸ್ ನೀಡಿದ ನ್ಯಾಯಾಲಯ ತನಿಖೆಗೆ ತಡೆ ನೀಡಲು ನಿರಾಕರಿಸಿತು. ತನ್ನ ವಿರುದ್ಧದ ಎಫ್ಐಆರ್ಗಳನ್ನು ಒಗ್ಗೂಡಿಸಿ ತನಿಖೆ ನಡೆಸಬೇಕು ಎಂದು ಠಾಕೂರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ. ಮುಸ್ಲಿಂ ಮಹಿಳೆಯರ ಛಾಯಾಚಿತ್ರಗಳು ಮತ್ತು ವೈಯಕ್ತಿಕ ಮಾಹಿತಿಯನ್ನು ಹೊಂದಿರುವ ಓಪನ್ ಸೋರ್ಸ್ ಅಪ್ಲಿಕೇಶನ್ ರೂಪಿಸಿದ ಆರೋಪ ಠಾಕೂರ್ ಮೇಲಿದೆ. ಸುಲ್ಲಿ ಡೀಲ್ ಪ್ರಕರಣದಲ್ಲಿ ಆತನಿಗೆ ದೆಹಲಿ ನ್ಯಾಯಾಲಯ ಈ ಹಿಂದೆ ಜಾಮೀನು ನೀಡಿತ್ತು.
ಪ್ರತಿಷ್ಠಿತ ಮುಸ್ಲಿಂ ಮಹಿಳೆಯರ ಛಾಯಾಚಿತ್ರಗಳನ್ನು ಅಕ್ರಮವಾಗಿ ಬಳಸಿ ಅವರನ್ನು ಹರಾಜಿಗಿರಿಸಿರುವುದಾಗಿ ಬಿಂಬಿಸಿದ್ದ ಬುಲ್ಲಿಬಾಯ್ ಅಪ್ಲಿಕೇಷನ್ ರೂಪಿಸಿದ ಪ್ರಕರಣದಲ್ಲಿಯೂ ಠಾಕೂರ್ ಆರೋಪಿಯಾಗಿದ್ದಾನೆ.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…