ದೇಶ- ವಿದೇಶ

ಎಫ್ಐಆರ್ ಒಗ್ಗೂಡಿಸಲು ಸುಲ್ಲಿ ಡೀಲ್ಸ್ ಆರೋಪಿ ಕೋರಿಕೆ: ವಿವಿಧ ರಾಜ್ಯ ಸರ್ಕಾರಗಳ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ನವದೆಹಲಿ: ಸುಲ್ಲಿ ಡೀಲ್ಸ್‌ ಮೊಬೈಲ್‌ ಅಪ್ಲಿಕೇಷನ್‌ ಮೂಲಕ ವಿವಿಧ ಗುಂಪುಗಳ ನಡುವೆ ದ್ವೇಷ ಪ್ರಚೋದನೆ ಮಾಡಿದ ಆರೋಪ ಎದುರಿಸುತ್ತಿದ್ದ ಓಂಕಾರೇಶ್ವರ್‌ ಠಾಕೂರ್‌ ಮನವಿಗೆ ಸಂಬಂಧಿಸಿದಂತೆ ಶುಕ್ರವಾರ ದೆಹಲಿ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯ ಸರ್ಕಾರಗಳು ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್‌ ಕೇಳಿದೆ.

ಸುಲ್ಲಿ ಡೀಲ್ಸ್ ಮತ್ತು ಬುಲ್ಲಿ ಬಾಯಿ ಎಂಬ ಎರಡು ಅಪ್ಲಿಕೇಷನ್‌ ರಚಿಸಿ ವಿಭಿನ್ನ ಕೃತ್ಯಗಳಿಗಾಗಿ ಬೇರೆ ಬೇರೆ ಸೆಕ್ಷನ್‌ಗಳಡಿ ಆರೋಪ ಹೊರಿಸಿರುವುದರಿಂದ ಅರ್ಜಿಯನ್ನು ಪುರಸ್ಕರಿಸಬಹುದೇ ಎಂದು ನ್ಯಾಯಾಲಯ ಅಚ್ಚರಿ ವ್ಯಕ್ತಪಡಿಸಿತು. ಎಲ್ಲಾ ಎಫ್‌ಐಆರ್‌ಗಳು ವಿಭಿನ್ನವಾಗಿವೆ ಎಂದು ಅದು ಹೇಳಿತು.

ಅಂತಿಮವಾಗಿ ನೋಟಿಸ್‌ ನೀಡಿದ ನ್ಯಾಯಾಲಯ ತನಿಖೆಗೆ ತಡೆ ನೀಡಲು ನಿರಾಕರಿಸಿತು. ತನ್ನ ವಿರುದ್ಧದ ಎಫ್‌ಐಆರ್‌ಗಳನ್ನು ಒಗ್ಗೂಡಿಸಿ ತನಿಖೆ ನಡೆಸಬೇಕು ಎಂದು ಠಾಕೂರ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ. ಮುಸ್ಲಿಂ ಮಹಿಳೆಯರ ಛಾಯಾಚಿತ್ರಗಳು ಮತ್ತು ವೈಯಕ್ತಿಕ ಮಾಹಿತಿಯನ್ನು ಹೊಂದಿರುವ ಓಪನ್ ಸೋರ್ಸ್ ಅಪ್ಲಿಕೇಶನ್ ರೂಪಿಸಿದ ಆರೋಪ ಠಾಕೂರ್‌ ಮೇಲಿದೆ. ಸುಲ್ಲಿ ಡೀಲ್ ಪ್ರಕರಣದಲ್ಲಿ ಆತನಿಗೆ ದೆಹಲಿ ನ್ಯಾಯಾಲಯ ಈ ಹಿಂದೆ ಜಾಮೀನು ನೀಡಿತ್ತು.

ಪ್ರತಿಷ್ಠಿತ ಮುಸ್ಲಿಂ ಮಹಿಳೆಯರ ಛಾಯಾಚಿತ್ರಗಳನ್ನು ಅಕ್ರಮವಾಗಿ ಬಳಸಿ ಅವರನ್ನು ಹರಾಜಿಗಿರಿಸಿರುವುದಾಗಿ ಬಿಂಬಿಸಿದ್ದ ಬುಲ್ಲಿಬಾಯ್‌ ಅಪ್ಲಿಕೇಷನ್‌ ರೂಪಿಸಿದ ಪ್ರಕರಣದಲ್ಲಿಯೂ ಠಾಕೂರ್‌ ಆರೋಪಿಯಾಗಿದ್ದಾನೆ.

andolana

Recent Posts

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

2 hours ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

2 hours ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

2 hours ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

3 hours ago

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

3 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

3 hours ago