ದೇಶ- ವಿದೇಶ

ಅಯೋಧ್ಯೆ: ರಾಮಮಂದಿರದಲ್ಲಿ ಬಾಲರಾಮನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ

ಅಯೋಧ್ಯೆ: ಜನವರಿ ತಿಂಗಳಿನಲ್ಲಿ ಪ್ರಾಣಪ್ರತಿಷ್ಠೆ ನಡೆದ ಬಳಿಕ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ರಾಮನವಮಿಯನ್ನು ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯ ಸಂಭ್ರಮದಲ್ಲಿ ಬಾಲರಾಮನ ಮೂರ್ತಿಗೆ ಸೂರ್ಯರಶ್ಮಿಯ ಸ್ಪರ್ಶವೂ ಸಹ ಆಗಿದೆ.

ಹೌದು, ಕನ್ನಡಿ ಹಾಗೂ ಮಸೂರಗಳನ್ನು ಬಳಸಿ ಬಾಲರಾಮನ ಹಣೆಗೆ ಸೂರ್ಯನ ಕಿರಣ ಸ್ಪರ್ಶಿಸುವ ಹಾಗೆ ಮಾಡಿದ್ದಾರೆ ವಿಜ್ಞಾನಿಗಳು. ಕೌನ್ಸಿಲ್‌ ಆಫ್‌ ಸೈಂಟಿಫಿಕ್‌ ಅಂಡ್‌ ಇಂಡಸ್ಟ್ರಿಯಲ್‌ ರಿಸರ್ಚ್‌ ( CSIR ), ಸೆಂಟ್ರಲ್‌ ಬಿಲ್ಡಿಂಗ್‌ ರಿಸರ್ಚ್ ಇನ್ಸ್ಟಿಟ್ಯೂಟ್‌ ( CBRI ) ವಿಜ್ಞಾನಿಗಳ ಪ್ರಕಾರ ಬಾಲರಾಮನ ಹಣೆಯ ಮೇಲೆ ಬಿದ್ದಿರುವ ಈ ಯೋಜಿತ ಸೂರ್ಯರಶ್ಮಿಯು 58 ಮಿ.ಮೀ ಗಾತ್ರವನ್ನು ಹೊಂದಿದ್ದು, ಮೂರರಿಂದ ಮೂರೂವರೆ ನಿಮಿಷಗಳು ಇರಲಿದೆ ಎಂದು ಹೇಳಲಾಗಿದೆ.

ಇನ್ನು ಈ ಯೋಜಿತ ಸೂರ್ಯರಶ್ಮಿಯನ್ನು ಪ್ರತಿ ರಾಮನವಮಿಯಂದು ಬಾಲರಾಮನ ಮೇಲೆ ಬೀಳುವ ಹಾಗೆ ಮಾಡುವ ಯೋಜನೆಯನ್ನು ಹಾಕಲಾಗಿದೆ ಎಂದೂ ಸಹ ಹೇಳಲಾಗುತ್ತಿದೆ.

 

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

34 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

49 mins ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

1 hour ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

2 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

2 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

2 hours ago