ಅಯೋಧ್ಯೆ: ಜನವರಿ ತಿಂಗಳಿನಲ್ಲಿ ಪ್ರಾಣಪ್ರತಿಷ್ಠೆ ನಡೆದ ಬಳಿಕ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ರಾಮನವಮಿಯನ್ನು ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯ ಸಂಭ್ರಮದಲ್ಲಿ ಬಾಲರಾಮನ ಮೂರ್ತಿಗೆ ಸೂರ್ಯರಶ್ಮಿಯ ಸ್ಪರ್ಶವೂ ಸಹ ಆಗಿದೆ.
ಹೌದು, ಕನ್ನಡಿ ಹಾಗೂ ಮಸೂರಗಳನ್ನು ಬಳಸಿ ಬಾಲರಾಮನ ಹಣೆಗೆ ಸೂರ್ಯನ ಕಿರಣ ಸ್ಪರ್ಶಿಸುವ ಹಾಗೆ ಮಾಡಿದ್ದಾರೆ ವಿಜ್ಞಾನಿಗಳು. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ( CSIR ), ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ ( CBRI ) ವಿಜ್ಞಾನಿಗಳ ಪ್ರಕಾರ ಬಾಲರಾಮನ ಹಣೆಯ ಮೇಲೆ ಬಿದ್ದಿರುವ ಈ ಯೋಜಿತ ಸೂರ್ಯರಶ್ಮಿಯು 58 ಮಿ.ಮೀ ಗಾತ್ರವನ್ನು ಹೊಂದಿದ್ದು, ಮೂರರಿಂದ ಮೂರೂವರೆ ನಿಮಿಷಗಳು ಇರಲಿದೆ ಎಂದು ಹೇಳಲಾಗಿದೆ.
ಇನ್ನು ಈ ಯೋಜಿತ ಸೂರ್ಯರಶ್ಮಿಯನ್ನು ಪ್ರತಿ ರಾಮನವಮಿಯಂದು ಬಾಲರಾಮನ ಮೇಲೆ ಬೀಳುವ ಹಾಗೆ ಮಾಡುವ ಯೋಜನೆಯನ್ನು ಹಾಕಲಾಗಿದೆ ಎಂದೂ ಸಹ ಹೇಳಲಾಗುತ್ತಿದೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…