ದೇಶ- ವಿದೇಶ

ಅಯೋಧ್ಯೆ: ರಾಮಮಂದಿರದಲ್ಲಿ ಬಾಲರಾಮನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ

ಅಯೋಧ್ಯೆ: ಜನವರಿ ತಿಂಗಳಿನಲ್ಲಿ ಪ್ರಾಣಪ್ರತಿಷ್ಠೆ ನಡೆದ ಬಳಿಕ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ರಾಮನವಮಿಯನ್ನು ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯ ಸಂಭ್ರಮದಲ್ಲಿ ಬಾಲರಾಮನ ಮೂರ್ತಿಗೆ ಸೂರ್ಯರಶ್ಮಿಯ ಸ್ಪರ್ಶವೂ ಸಹ ಆಗಿದೆ.

ಹೌದು, ಕನ್ನಡಿ ಹಾಗೂ ಮಸೂರಗಳನ್ನು ಬಳಸಿ ಬಾಲರಾಮನ ಹಣೆಗೆ ಸೂರ್ಯನ ಕಿರಣ ಸ್ಪರ್ಶಿಸುವ ಹಾಗೆ ಮಾಡಿದ್ದಾರೆ ವಿಜ್ಞಾನಿಗಳು. ಕೌನ್ಸಿಲ್‌ ಆಫ್‌ ಸೈಂಟಿಫಿಕ್‌ ಅಂಡ್‌ ಇಂಡಸ್ಟ್ರಿಯಲ್‌ ರಿಸರ್ಚ್‌ ( CSIR ), ಸೆಂಟ್ರಲ್‌ ಬಿಲ್ಡಿಂಗ್‌ ರಿಸರ್ಚ್ ಇನ್ಸ್ಟಿಟ್ಯೂಟ್‌ ( CBRI ) ವಿಜ್ಞಾನಿಗಳ ಪ್ರಕಾರ ಬಾಲರಾಮನ ಹಣೆಯ ಮೇಲೆ ಬಿದ್ದಿರುವ ಈ ಯೋಜಿತ ಸೂರ್ಯರಶ್ಮಿಯು 58 ಮಿ.ಮೀ ಗಾತ್ರವನ್ನು ಹೊಂದಿದ್ದು, ಮೂರರಿಂದ ಮೂರೂವರೆ ನಿಮಿಷಗಳು ಇರಲಿದೆ ಎಂದು ಹೇಳಲಾಗಿದೆ.

ಇನ್ನು ಈ ಯೋಜಿತ ಸೂರ್ಯರಶ್ಮಿಯನ್ನು ಪ್ರತಿ ರಾಮನವಮಿಯಂದು ಬಾಲರಾಮನ ಮೇಲೆ ಬೀಳುವ ಹಾಗೆ ಮಾಡುವ ಯೋಜನೆಯನ್ನು ಹಾಕಲಾಗಿದೆ ಎಂದೂ ಸಹ ಹೇಳಲಾಗುತ್ತಿದೆ.

 

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

8 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

10 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

13 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

13 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

13 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

16 hours ago