ಅಯೋಧ್ಯೆ: ಜನವರಿ ತಿಂಗಳಿನಲ್ಲಿ ಪ್ರಾಣಪ್ರತಿಷ್ಠೆ ನಡೆದ ಬಳಿಕ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ರಾಮನವಮಿಯನ್ನು ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯ ಸಂಭ್ರಮದಲ್ಲಿ ಬಾಲರಾಮನ ಮೂರ್ತಿಗೆ ಸೂರ್ಯರಶ್ಮಿಯ ಸ್ಪರ್ಶವೂ ಸಹ ಆಗಿದೆ.
ಹೌದು, ಕನ್ನಡಿ ಹಾಗೂ ಮಸೂರಗಳನ್ನು ಬಳಸಿ ಬಾಲರಾಮನ ಹಣೆಗೆ ಸೂರ್ಯನ ಕಿರಣ ಸ್ಪರ್ಶಿಸುವ ಹಾಗೆ ಮಾಡಿದ್ದಾರೆ ವಿಜ್ಞಾನಿಗಳು. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ( CSIR ), ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ ( CBRI ) ವಿಜ್ಞಾನಿಗಳ ಪ್ರಕಾರ ಬಾಲರಾಮನ ಹಣೆಯ ಮೇಲೆ ಬಿದ್ದಿರುವ ಈ ಯೋಜಿತ ಸೂರ್ಯರಶ್ಮಿಯು 58 ಮಿ.ಮೀ ಗಾತ್ರವನ್ನು ಹೊಂದಿದ್ದು, ಮೂರರಿಂದ ಮೂರೂವರೆ ನಿಮಿಷಗಳು ಇರಲಿದೆ ಎಂದು ಹೇಳಲಾಗಿದೆ.
ಇನ್ನು ಈ ಯೋಜಿತ ಸೂರ್ಯರಶ್ಮಿಯನ್ನು ಪ್ರತಿ ರಾಮನವಮಿಯಂದು ಬಾಲರಾಮನ ಮೇಲೆ ಬೀಳುವ ಹಾಗೆ ಮಾಡುವ ಯೋಜನೆಯನ್ನು ಹಾಕಲಾಗಿದೆ ಎಂದೂ ಸಹ ಹೇಳಲಾಗುತ್ತಿದೆ.
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…