ಅಯೋಧ್ಯೆ: ಜನವರಿ ತಿಂಗಳಿನಲ್ಲಿ ಪ್ರಾಣಪ್ರತಿಷ್ಠೆ ನಡೆದ ಬಳಿಕ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ರಾಮನವಮಿಯನ್ನು ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯ ಸಂಭ್ರಮದಲ್ಲಿ ಬಾಲರಾಮನ ಮೂರ್ತಿಗೆ ಸೂರ್ಯರಶ್ಮಿಯ ಸ್ಪರ್ಶವೂ ಸಹ ಆಗಿದೆ.
ಹೌದು, ಕನ್ನಡಿ ಹಾಗೂ ಮಸೂರಗಳನ್ನು ಬಳಸಿ ಬಾಲರಾಮನ ಹಣೆಗೆ ಸೂರ್ಯನ ಕಿರಣ ಸ್ಪರ್ಶಿಸುವ ಹಾಗೆ ಮಾಡಿದ್ದಾರೆ ವಿಜ್ಞಾನಿಗಳು. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ( CSIR ), ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ ( CBRI ) ವಿಜ್ಞಾನಿಗಳ ಪ್ರಕಾರ ಬಾಲರಾಮನ ಹಣೆಯ ಮೇಲೆ ಬಿದ್ದಿರುವ ಈ ಯೋಜಿತ ಸೂರ್ಯರಶ್ಮಿಯು 58 ಮಿ.ಮೀ ಗಾತ್ರವನ್ನು ಹೊಂದಿದ್ದು, ಮೂರರಿಂದ ಮೂರೂವರೆ ನಿಮಿಷಗಳು ಇರಲಿದೆ ಎಂದು ಹೇಳಲಾಗಿದೆ.
ಇನ್ನು ಈ ಯೋಜಿತ ಸೂರ್ಯರಶ್ಮಿಯನ್ನು ಪ್ರತಿ ರಾಮನವಮಿಯಂದು ಬಾಲರಾಮನ ಮೇಲೆ ಬೀಳುವ ಹಾಗೆ ಮಾಡುವ ಯೋಜನೆಯನ್ನು ಹಾಕಲಾಗಿದೆ ಎಂದೂ ಸಹ ಹೇಳಲಾಗುತ್ತಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…