ದೇಶ- ವಿದೇಶ

ಸುದೀರ್ಘ ಬಾಹ್ಯಾಕಾಶ ನಡಿಗೆ ಪೂರೈಸಿದ ಮೊದಲ ಮಹಿಳಾ ಗಗನಯಾತ್ರಿ: ಸುನಿತಾ ವಿಲಿಯಮ್ಸ್‌

ಫ್ಲೋರಿಡಾ: ಬಾಹ್ಯಾಕಾಶದಲ್ಲಿ ಸುದೀರ್ಘವಾಗಿ 286 ದಿನಗಳ ಕಾಲ ತಮ್ಮ ನಡಿಗೆಯನ್ನು ಪೂರೈಸಿ ಭೂಮಿಗೆ ಹಿಂತಿರುಗಿದ ಭಾರತೀಯ ಮೂಲದ ಮೊದಲ ಮಹಿಳಾ ಗಗನಯಾತ್ರಿಯಾಗಿ ಸುನಿತಾ ವಿಲಯಮ್ಸ್‌ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಬೋಯಿಂಗ್ ಸ್ಟಾರ್ ಲೈನರ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದ ಸುನಿತಾ ಅವರು 62 ಗಂಟೆ 6 ನಿಮಿಷಗಳ ಕಾಲ ಬಾಹ್ಯಾಕಾಶದಲ್ಲಿ ತಮ್ಮ ನಡಿಗೆಯನ್ನು ಪೂರೈಸಿದ್ದಾರೆ. ಈ ಹಿನ್ನೆಲೆ ಬಾಹ್ಯಾಕಾಶ ನಡಿಗೆ ಪೂರೈಸಿದ ಗಗಯಾತ್ರಿಗಳ ಸಾರ್ವಕಾಲಿಕ ದಾಖಲೆ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದುಕೊಂಡ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

2024ರ ಜೂನ್ 6ರಂದು ಸುನಿತಾ ಹಾಗೂ ವಿಲ್ಮೋರ್ ಅವರು 8 ದಿನಗಳ ಕಾರ್ಯಾಚರಣೆಗಾಗಿ ಬೋಯಿಂಗ್ ಸ್ಟಾರ್ ಲೈನರ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಆದರೆ ಬಾಹ್ಯಾಕಾಶದಲ್ಲಿ ನೌಕೆಯ ಸಮಸ್ಯೆ ಮತ್ತು ತಾಂತ್ರಿಕ ದೋಷಗಳಿಂದಾಗಿ ಭೂಮಿಗೆ ಹಿಂದಿರುಗಲು ಸಾಧ್ಯವಾಗಿರಲಿಲ್ಲ.

ಈ ಕಾರಣಕ್ಕೆ ಅವರು ಬಾಹ್ಯಾಕಾಶದಲ್ಲಿ 286 ದಿನಗಳು ಕಳೆಯಬೇಕಾಯಿತು. ಆದರೆ ಇಂದು ಭಾರತ ಸಮಯದ ಪ್ರಕಾರ ಮಧ್ಯರಾತ್ರಿ 3.37ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ರಾಕೆಟ್‌ನ ಮೂಲಕ ಲ್ಯಾಂಡ್‌ ಆಗಿದ್ದಾರೆ. ಇನ್ನು ಸುನಿತಾ ಅವರು ಬಾಹ್ಯಾಕಾಶ ಕೇಂದ್ರದಲ್ಲಿ ಸುದೀರ್ಘ ವಾಸ ಮಾಡಿದ ವಿಶ್ವದ 2ನೇ ಗಗನಯಾತ್ರಿ ಆಗಿದ್ದಾರೆ. ಅಲ್ಲದೇ ಸುನಿತಾ ಅವರು ಒಟ್ಟಾರೆ 608 ದಿನಗಳನ್ನು ಬಾಹ್ಯಾಕಾಶ ಕೇಂದ್ರದಲ್ಲಿ ಕಳೆದಿದ್ದರೆ, ಪೆಗ್ಗಿ ವಿಟ್ಸನ್‌ ಅವರು 675 ದಿನಗಳನ್ನು ಪೂರೈಸಿ ಮೊದಲ ಸ್ಥಾನದಲ್ಲಿ ಇದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

8 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

9 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

11 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

15 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

16 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

22 hours ago