ದೇಶ- ವಿದೇಶ

ಸುದೀರ್ಘ ಬಾಹ್ಯಾಕಾಶ ನಡಿಗೆ ಪೂರೈಸಿದ ಮೊದಲ ಮಹಿಳಾ ಗಗನಯಾತ್ರಿ: ಸುನಿತಾ ವಿಲಿಯಮ್ಸ್‌

ಫ್ಲೋರಿಡಾ: ಬಾಹ್ಯಾಕಾಶದಲ್ಲಿ ಸುದೀರ್ಘವಾಗಿ 286 ದಿನಗಳ ಕಾಲ ತಮ್ಮ ನಡಿಗೆಯನ್ನು ಪೂರೈಸಿ ಭೂಮಿಗೆ ಹಿಂತಿರುಗಿದ ಭಾರತೀಯ ಮೂಲದ ಮೊದಲ ಮಹಿಳಾ ಗಗನಯಾತ್ರಿಯಾಗಿ ಸುನಿತಾ ವಿಲಯಮ್ಸ್‌ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಬೋಯಿಂಗ್ ಸ್ಟಾರ್ ಲೈನರ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದ ಸುನಿತಾ ಅವರು 62 ಗಂಟೆ 6 ನಿಮಿಷಗಳ ಕಾಲ ಬಾಹ್ಯಾಕಾಶದಲ್ಲಿ ತಮ್ಮ ನಡಿಗೆಯನ್ನು ಪೂರೈಸಿದ್ದಾರೆ. ಈ ಹಿನ್ನೆಲೆ ಬಾಹ್ಯಾಕಾಶ ನಡಿಗೆ ಪೂರೈಸಿದ ಗಗಯಾತ್ರಿಗಳ ಸಾರ್ವಕಾಲಿಕ ದಾಖಲೆ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದುಕೊಂಡ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

2024ರ ಜೂನ್ 6ರಂದು ಸುನಿತಾ ಹಾಗೂ ವಿಲ್ಮೋರ್ ಅವರು 8 ದಿನಗಳ ಕಾರ್ಯಾಚರಣೆಗಾಗಿ ಬೋಯಿಂಗ್ ಸ್ಟಾರ್ ಲೈನರ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಆದರೆ ಬಾಹ್ಯಾಕಾಶದಲ್ಲಿ ನೌಕೆಯ ಸಮಸ್ಯೆ ಮತ್ತು ತಾಂತ್ರಿಕ ದೋಷಗಳಿಂದಾಗಿ ಭೂಮಿಗೆ ಹಿಂದಿರುಗಲು ಸಾಧ್ಯವಾಗಿರಲಿಲ್ಲ.

ಈ ಕಾರಣಕ್ಕೆ ಅವರು ಬಾಹ್ಯಾಕಾಶದಲ್ಲಿ 286 ದಿನಗಳು ಕಳೆಯಬೇಕಾಯಿತು. ಆದರೆ ಇಂದು ಭಾರತ ಸಮಯದ ಪ್ರಕಾರ ಮಧ್ಯರಾತ್ರಿ 3.37ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ರಾಕೆಟ್‌ನ ಮೂಲಕ ಲ್ಯಾಂಡ್‌ ಆಗಿದ್ದಾರೆ. ಇನ್ನು ಸುನಿತಾ ಅವರು ಬಾಹ್ಯಾಕಾಶ ಕೇಂದ್ರದಲ್ಲಿ ಸುದೀರ್ಘ ವಾಸ ಮಾಡಿದ ವಿಶ್ವದ 2ನೇ ಗಗನಯಾತ್ರಿ ಆಗಿದ್ದಾರೆ. ಅಲ್ಲದೇ ಸುನಿತಾ ಅವರು ಒಟ್ಟಾರೆ 608 ದಿನಗಳನ್ನು ಬಾಹ್ಯಾಕಾಶ ಕೇಂದ್ರದಲ್ಲಿ ಕಳೆದಿದ್ದರೆ, ಪೆಗ್ಗಿ ವಿಟ್ಸನ್‌ ಅವರು 675 ದಿನಗಳನ್ನು ಪೂರೈಸಿ ಮೊದಲ ಸ್ಥಾನದಲ್ಲಿ ಇದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

11 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

11 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

12 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

12 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

12 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

13 hours ago