ದೇಶ- ವಿದೇಶ

ಸುದೀರ್ಘ ಬಾಹ್ಯಾಕಾಶ ನಡಿಗೆ ಪೂರೈಸಿದ ಮೊದಲ ಮಹಿಳಾ ಗಗನಯಾತ್ರಿ: ಸುನಿತಾ ವಿಲಿಯಮ್ಸ್‌

ಫ್ಲೋರಿಡಾ: ಬಾಹ್ಯಾಕಾಶದಲ್ಲಿ ಸುದೀರ್ಘವಾಗಿ 286 ದಿನಗಳ ಕಾಲ ತಮ್ಮ ನಡಿಗೆಯನ್ನು ಪೂರೈಸಿ ಭೂಮಿಗೆ ಹಿಂತಿರುಗಿದ ಭಾರತೀಯ ಮೂಲದ ಮೊದಲ ಮಹಿಳಾ ಗಗನಯಾತ್ರಿಯಾಗಿ ಸುನಿತಾ ವಿಲಯಮ್ಸ್‌ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಬೋಯಿಂಗ್ ಸ್ಟಾರ್ ಲೈನರ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದ ಸುನಿತಾ ಅವರು 62 ಗಂಟೆ 6 ನಿಮಿಷಗಳ ಕಾಲ ಬಾಹ್ಯಾಕಾಶದಲ್ಲಿ ತಮ್ಮ ನಡಿಗೆಯನ್ನು ಪೂರೈಸಿದ್ದಾರೆ. ಈ ಹಿನ್ನೆಲೆ ಬಾಹ್ಯಾಕಾಶ ನಡಿಗೆ ಪೂರೈಸಿದ ಗಗಯಾತ್ರಿಗಳ ಸಾರ್ವಕಾಲಿಕ ದಾಖಲೆ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದುಕೊಂಡ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

2024ರ ಜೂನ್ 6ರಂದು ಸುನಿತಾ ಹಾಗೂ ವಿಲ್ಮೋರ್ ಅವರು 8 ದಿನಗಳ ಕಾರ್ಯಾಚರಣೆಗಾಗಿ ಬೋಯಿಂಗ್ ಸ್ಟಾರ್ ಲೈನರ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಆದರೆ ಬಾಹ್ಯಾಕಾಶದಲ್ಲಿ ನೌಕೆಯ ಸಮಸ್ಯೆ ಮತ್ತು ತಾಂತ್ರಿಕ ದೋಷಗಳಿಂದಾಗಿ ಭೂಮಿಗೆ ಹಿಂದಿರುಗಲು ಸಾಧ್ಯವಾಗಿರಲಿಲ್ಲ.

ಈ ಕಾರಣಕ್ಕೆ ಅವರು ಬಾಹ್ಯಾಕಾಶದಲ್ಲಿ 286 ದಿನಗಳು ಕಳೆಯಬೇಕಾಯಿತು. ಆದರೆ ಇಂದು ಭಾರತ ಸಮಯದ ಪ್ರಕಾರ ಮಧ್ಯರಾತ್ರಿ 3.37ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ರಾಕೆಟ್‌ನ ಮೂಲಕ ಲ್ಯಾಂಡ್‌ ಆಗಿದ್ದಾರೆ. ಇನ್ನು ಸುನಿತಾ ಅವರು ಬಾಹ್ಯಾಕಾಶ ಕೇಂದ್ರದಲ್ಲಿ ಸುದೀರ್ಘ ವಾಸ ಮಾಡಿದ ವಿಶ್ವದ 2ನೇ ಗಗನಯಾತ್ರಿ ಆಗಿದ್ದಾರೆ. ಅಲ್ಲದೇ ಸುನಿತಾ ಅವರು ಒಟ್ಟಾರೆ 608 ದಿನಗಳನ್ನು ಬಾಹ್ಯಾಕಾಶ ಕೇಂದ್ರದಲ್ಲಿ ಕಳೆದಿದ್ದರೆ, ಪೆಗ್ಗಿ ವಿಟ್ಸನ್‌ ಅವರು 675 ದಿನಗಳನ್ನು ಪೂರೈಸಿ ಮೊದಲ ಸ್ಥಾನದಲ್ಲಿ ಇದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 mins ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

14 mins ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

1 hour ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

2 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

3 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

5 hours ago