ವಾಷಿಂಗ್ಟನ್: 9 ತಿಂಗಳ ಬಳಿಕ ಬಾಹ್ಯಾಕಾಶದಿಂದ ಭೂಮಿಗೆ ಮರಳಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಬಾಹ್ಯಾಕಾಶದಲ್ಲಿನ ಹಲವು ಕೌತುಕಗಳು, ಸಂಶೋಧನೆ ಹಾಗೂ ಭೂಮಿ ಕುರಿತು ಅನುಭವ ಹಂಚಿಕೊಂಡಿರುವ ಅವರು, ಭಾರತದ ಬಗ್ಗೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸುನೀತಾ ವಿಲಿಯಮ್ಸ್ ಅವರು, ನಾನು ಶೀಘ್ರದಲ್ಲೇ ನನ್ನ ತಂದೆಯ ತಾಯ್ನಾಡಿಗೆ ಭೇಟಿ ನೀಡುತ್ತೇನೆ. ಮುಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗುವ ಭಾರತೀಯ ಪ್ರಜೆಗಳನ್ನು ಭೇಟಿ ಮಾಡುತ್ತೇನೆ. ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ದೇಶ ಎಂದು ಬಣ್ಣಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಭಾರತ ಬಾಹ್ಯಾಕಾಶ ಜಗತ್ತಿನಲ್ಲಿ ತನ್ನ ನೆಲೆಯನ್ನು ಸ್ಥಾಪಿಸಿದೆ. ನಾನು ಅವರಿಗೆ ಸಹಾಯ ಮಾಡಲು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ಬಾಹ್ಯಾಕಾಶದಿಂದ ಭಾರತ ಅದ್ಭುತವಾಗಿ ಕಾಣುತ್ತದೆ. ಹಿಮಾಲಯದ ಮೇಲೆ ಹೋದಾಗಲೆಲ್ಲಾ ಅದ್ಭುತ ಚಿತ್ರಗಳು ಸಿಕ್ಕಿವೆ. ಗುಜರಾತ್ ಹಾಗೂ ಮುಂಬೈ ದೀಪಗಳ ಜಾಲದಂತೆ ಕಾಣುತ್ತದೆ ಎಂದು ತಿಳಿಸಿದರು.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…