ವಾಷಿಂಗ್ಟನ್: 9 ತಿಂಗಳ ಬಳಿಕ ಬಾಹ್ಯಾಕಾಶದಿಂದ ಭೂಮಿಗೆ ಮರಳಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಬಾಹ್ಯಾಕಾಶದಲ್ಲಿನ ಹಲವು ಕೌತುಕಗಳು, ಸಂಶೋಧನೆ ಹಾಗೂ ಭೂಮಿ ಕುರಿತು ಅನುಭವ ಹಂಚಿಕೊಂಡಿರುವ ಅವರು, ಭಾರತದ ಬಗ್ಗೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸುನೀತಾ ವಿಲಿಯಮ್ಸ್ ಅವರು, ನಾನು ಶೀಘ್ರದಲ್ಲೇ ನನ್ನ ತಂದೆಯ ತಾಯ್ನಾಡಿಗೆ ಭೇಟಿ ನೀಡುತ್ತೇನೆ. ಮುಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗುವ ಭಾರತೀಯ ಪ್ರಜೆಗಳನ್ನು ಭೇಟಿ ಮಾಡುತ್ತೇನೆ. ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ದೇಶ ಎಂದು ಬಣ್ಣಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಭಾರತ ಬಾಹ್ಯಾಕಾಶ ಜಗತ್ತಿನಲ್ಲಿ ತನ್ನ ನೆಲೆಯನ್ನು ಸ್ಥಾಪಿಸಿದೆ. ನಾನು ಅವರಿಗೆ ಸಹಾಯ ಮಾಡಲು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ಬಾಹ್ಯಾಕಾಶದಿಂದ ಭಾರತ ಅದ್ಭುತವಾಗಿ ಕಾಣುತ್ತದೆ. ಹಿಮಾಲಯದ ಮೇಲೆ ಹೋದಾಗಲೆಲ್ಲಾ ಅದ್ಭುತ ಚಿತ್ರಗಳು ಸಿಕ್ಕಿವೆ. ಗುಜರಾತ್ ಹಾಗೂ ಮುಂಬೈ ದೀಪಗಳ ಜಾಲದಂತೆ ಕಾಣುತ್ತದೆ ಎಂದು ತಿಳಿಸಿದರು.
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…
ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…