ವಾಷಿಂಗ್ಟನ್: 9 ತಿಂಗಳ ಬಳಿಕ ಬಾಹ್ಯಾಕಾಶದಿಂದ ಭೂಮಿಗೆ ಮರಳಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಬಾಹ್ಯಾಕಾಶದಲ್ಲಿನ ಹಲವು ಕೌತುಕಗಳು, ಸಂಶೋಧನೆ ಹಾಗೂ ಭೂಮಿ ಕುರಿತು ಅನುಭವ ಹಂಚಿಕೊಂಡಿರುವ ಅವರು, ಭಾರತದ ಬಗ್ಗೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸುನೀತಾ ವಿಲಿಯಮ್ಸ್ ಅವರು, ನಾನು ಶೀಘ್ರದಲ್ಲೇ ನನ್ನ ತಂದೆಯ ತಾಯ್ನಾಡಿಗೆ ಭೇಟಿ ನೀಡುತ್ತೇನೆ. ಮುಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗುವ ಭಾರತೀಯ ಪ್ರಜೆಗಳನ್ನು ಭೇಟಿ ಮಾಡುತ್ತೇನೆ. ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ದೇಶ ಎಂದು ಬಣ್ಣಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಭಾರತ ಬಾಹ್ಯಾಕಾಶ ಜಗತ್ತಿನಲ್ಲಿ ತನ್ನ ನೆಲೆಯನ್ನು ಸ್ಥಾಪಿಸಿದೆ. ನಾನು ಅವರಿಗೆ ಸಹಾಯ ಮಾಡಲು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ಬಾಹ್ಯಾಕಾಶದಿಂದ ಭಾರತ ಅದ್ಭುತವಾಗಿ ಕಾಣುತ್ತದೆ. ಹಿಮಾಲಯದ ಮೇಲೆ ಹೋದಾಗಲೆಲ್ಲಾ ಅದ್ಭುತ ಚಿತ್ರಗಳು ಸಿಕ್ಕಿವೆ. ಗುಜರಾತ್ ಹಾಗೂ ಮುಂಬೈ ದೀಪಗಳ ಜಾಲದಂತೆ ಕಾಣುತ್ತದೆ ಎಂದು ತಿಳಿಸಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…