ನವದೆಹಲಿ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಕೋರಿ ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಸಾರ್ಜಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಪಶ್ಚಿಮ ಬಂಗಾಳದ ರಾಜಧಾನಿಯಲ್ಲಿರುವ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಂಸ್ಥೆಯೂ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಆತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ರಾಜೀನಾಮೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ವಜಾ ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಹಾಗೂ ಜೆ.ಬಿ.ಪರ್ದಿವಾಲಾ ಅವರನ್ನು ಒಳಗೊಂಡ ಪೀಠವು ವಿಚಾರಣೆ ನಡೆಸಿ, ಈ ತರಹದ ವಿಚಾರಗಳಲ್ಲಿ ರಾಜೀನಾಮೆ ನೀಡಬೇಕು ಎಂದು ಆದೇಶಿಸಲು ನ್ಯಾಯಾಲಯಕ್ಕೆ ಯಾವುದೇ ಅವಕಾಶವಿಲ್ಲ ಎಂದು ಅರ್ಜಿಯನ್ನು ವಜಾ ಮಾಡಿದೆ.
ವೈದ್ಯರ ಕುಂದುಕೊರತೆಗಳ ಬಗ್ಗೆ ಗಮನಹರಿಸಬಹುದೇ ಹೊರತು, ಒಂದು ರಾಜ್ಯದ ಮುಖ್ಯಮಂತ್ರಿಗೆ ರಾಜೀನಾಮೆ ನೀಡಬೇಕು ಎಂದು ಹೇಳಲು ಇದು ರಾಜಕೀಯ ವೇದಿಕೆಯಲ್ಲ. ಅಲ್ಲದೇ ಇಂತಹ ಆದೇಶ ಹೊರಡಿಸುವುದು ತಮ್ಮ ಅಧಿಕಾರದ ಭಾಗವಲ್ಲ ಎಂದು ಪೀಠ ಖಡಕ್ ಆಗಿ ಹೇಳಿದೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…