ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರಕ್ಷತಾ ಮಾರ್ಗಸೂಚಿಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ವಿಚಾರಣೆಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.
ಪ್ರಯಾಗ್ ರಾಜ್ನ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮಾರ್ಗಸೂಚಿ ಹೊರಡಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಎಂಬುವವರು ಸುಪ್ರೀಂಕೋರ್ಟ್ನಲ್ಲಿ ಪಿಐಎಲ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಇಂದು(ಫೆಬ್ರವರಿ.3) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠವೂ ಅಲಹಾಬಾದ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ.
ಇನ್ನೂ ಅಲಹಾಬಾದ್ ಹೈಕೋರ್ಟ್ನಲ್ಲಿ ಈ ಸಂಬಂಧ ಈಗಾಗಲೇ ಮನವಿ ಸಲ್ಲಿಸಿದ್ದು, ಪ್ರಸ್ತುತ ಈ ಅರ್ಜಿಯನ್ನು ಸುಪ್ರಿಂಕೋರ್ಟ್ನಲ್ಲಿ ವಿಚಾರಣೆಗೆ ಅಂಗೀಕರಿಸಬಾರದು ಎಂದು ಉತ್ತರ ಪ್ರದೇಶ ಸರ್ಕಾರ ಪರ ಹಾಜರಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರ ವಾದವನ್ನು ನ್ಯಾಯ ಪೀಠವೂ ಪರಿಗಣಿಸಿ ಆದೇಶ ಹೊರಡಿಸಿದೆ.
ಏನಿದು ಪ್ರಕರಣ?
ಹಿಂದೂ ಕ್ಯಾಲೆಂಡರ್ನ ಅತ್ಯಂತ ಮಂಗಳಕರ ದಿನಗಳಲ್ಲಿ ಒಂದಾದ ಮೌನಿ ಅಮಾವಾಸ್ಯೆಯ ವೇಳೆ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮ ಪ್ರದೇಶದಲ್ಲಿ ಮುಂಜಾನೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 30 ಮಂದಿ ಸಾವಿಗೀಡಾಗಿದ್ದರು. ಅಲ್ಲದೇ ಆ ಸಂದರ್ಭದಲ್ಲಿ 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…