ದೇಶ- ವಿದೇಶ

ಮಹಾಕುಂಭಮೇಳದ ಕಾಲ್ತುಳಿತ ಪ್ರಕರಣ| ಸುರಕ್ಷತಾ ಮಾರ್ಗಸೂಚಿಗೆ ಕೋರಿದ್ದ PIL ಅರ್ಜಿ ವಜಾ: ಸುಪ್ರೀಂಕೋರ್ಟ್‌

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರಕ್ಷತಾ ಮಾರ್ಗಸೂಚಿಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ವಿಚಾರಣೆಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.

ಪ್ರಯಾಗ್‌ ರಾಜ್‌ನ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮಾರ್ಗಸೂಚಿ ಹೊರಡಿಸುವಂತೆ ಕೋರಿ ವಕೀಲ ವಿಶಾಲ್‌ ತಿವಾರಿ ಎಂಬುವವರು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಇಂದು(ಫೆಬ್ರವರಿ.3) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್‌ ಕುಮಾರ್‌ ಅವರಿದ್ದ ದ್ವಿಸದಸ್ಯ ಪೀಠವೂ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ.

ಇನ್ನೂ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಈ ಸಂಬಂಧ ಈಗಾಗಲೇ ಮನವಿ ಸಲ್ಲಿಸಿದ್ದು, ಪ್ರಸ್ತುತ ಈ ಅರ್ಜಿಯನ್ನು ಸುಪ್ರಿಂಕೋರ್ಟ್‌ನಲ್ಲಿ ವಿಚಾರಣೆಗೆ ಅಂಗೀಕರಿಸಬಾರದು ಎಂದು ಉತ್ತರ ಪ್ರದೇಶ ಸರ್ಕಾರ ಪರ ಹಾಜರಿದ್ದ ಹಿರಿಯ ವಕೀಲ ಮುಕುಲ್‌ ರೋಹಟಗಿ ಅವರ ವಾದವನ್ನು ನ್ಯಾಯ ಪೀಠವೂ ಪರಿಗಣಿಸಿ ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

ಹಿಂದೂ ಕ್ಯಾಲೆಂಡರ್‌ನ ಅತ್ಯಂತ ಮಂಗಳಕರ ದಿನಗಳಲ್ಲಿ ಒಂದಾದ ಮೌನಿ ಅಮಾವಾಸ್ಯೆಯ ವೇಳೆ ಪ್ರಯಾಗ್‌ರಾಜ್ನ ತ್ರಿವೇಣಿ ಸಂಗಮ ಪ್ರದೇಶದಲ್ಲಿ ಮುಂಜಾನೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 30 ಮಂದಿ ಸಾವಿಗೀಡಾಗಿದ್ದರು. ಅಲ್ಲದೇ ಆ ಸಂದರ್ಭದಲ್ಲಿ 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಅರ್ಚನ ಎಸ್‌ ಎಸ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

45 mins ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

14 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

14 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

14 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

14 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

14 hours ago