ದೇಶ- ವಿದೇಶ

ಮಹಾಕುಂಭಮೇಳದ ಕಾಲ್ತುಳಿತ ಪ್ರಕರಣ| ಸುರಕ್ಷತಾ ಮಾರ್ಗಸೂಚಿಗೆ ಕೋರಿದ್ದ PIL ಅರ್ಜಿ ವಜಾ: ಸುಪ್ರೀಂಕೋರ್ಟ್‌

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರಕ್ಷತಾ ಮಾರ್ಗಸೂಚಿಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ವಿಚಾರಣೆಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.

ಪ್ರಯಾಗ್‌ ರಾಜ್‌ನ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮಾರ್ಗಸೂಚಿ ಹೊರಡಿಸುವಂತೆ ಕೋರಿ ವಕೀಲ ವಿಶಾಲ್‌ ತಿವಾರಿ ಎಂಬುವವರು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಇಂದು(ಫೆಬ್ರವರಿ.3) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್‌ ಕುಮಾರ್‌ ಅವರಿದ್ದ ದ್ವಿಸದಸ್ಯ ಪೀಠವೂ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ.

ಇನ್ನೂ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಈ ಸಂಬಂಧ ಈಗಾಗಲೇ ಮನವಿ ಸಲ್ಲಿಸಿದ್ದು, ಪ್ರಸ್ತುತ ಈ ಅರ್ಜಿಯನ್ನು ಸುಪ್ರಿಂಕೋರ್ಟ್‌ನಲ್ಲಿ ವಿಚಾರಣೆಗೆ ಅಂಗೀಕರಿಸಬಾರದು ಎಂದು ಉತ್ತರ ಪ್ರದೇಶ ಸರ್ಕಾರ ಪರ ಹಾಜರಿದ್ದ ಹಿರಿಯ ವಕೀಲ ಮುಕುಲ್‌ ರೋಹಟಗಿ ಅವರ ವಾದವನ್ನು ನ್ಯಾಯ ಪೀಠವೂ ಪರಿಗಣಿಸಿ ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

ಹಿಂದೂ ಕ್ಯಾಲೆಂಡರ್‌ನ ಅತ್ಯಂತ ಮಂಗಳಕರ ದಿನಗಳಲ್ಲಿ ಒಂದಾದ ಮೌನಿ ಅಮಾವಾಸ್ಯೆಯ ವೇಳೆ ಪ್ರಯಾಗ್‌ರಾಜ್ನ ತ್ರಿವೇಣಿ ಸಂಗಮ ಪ್ರದೇಶದಲ್ಲಿ ಮುಂಜಾನೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 30 ಮಂದಿ ಸಾವಿಗೀಡಾಗಿದ್ದರು. ಅಲ್ಲದೇ ಆ ಸಂದರ್ಭದಲ್ಲಿ 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಅರ್ಚನ ಎಸ್‌ ಎಸ್

Recent Posts

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

45 mins ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

3 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

5 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

5 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

6 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

11 hours ago