ದೇಶ- ವಿದೇಶ

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ.

ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು ಪ್ರಶ್ನಿಸಿ ಕೆ.ಶಂಕರ್‌ ಎನ್ನುವವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ವಿಚಾರಣೆ ನಡೆಸಿರುವ ನ್ಯಾ.ವಿಕ್ರಮನಾಥ್‌ ನೇತೃತ್ವದ ದ್ವಿಸದಸ್ಯ ಪೀಠವು, ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿ ಮಾಡಿದೆ.

ಇದನ್ನು ಓದಿ: ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ಏನಿದು ಪ್ರಕರಣ?: ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಆಮಿಷ ನೀಡಿ ಸಿದ್ದರಾಮಯ್ಯ ಗೆದ್ದಿದ್ದಾರೆ. ಆಮಿಷಗಳ ಮೂಲಕ ಮತದಾರರನ್ನು ತಮ್ಮೆಡೆಗೆ ಸೆಳೆಯುವುದು ಚುನಾವಣಾ ನಿಯಮಗಳಿಗೆ ವಿರುದ್ಧವಾಗಿದೆ. ಹೀಗಾಗಿ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ.ಶಂಕರ್‌ ಆಗ್ರಹಿಸಿದ್ದರು. ಇದೇ ವಿಚಾರವಾಗಿ ಹೈಕೋರ್ಟ್‌ ಮೆಟ್ಟಿಲನ್ನು ಕೂಡ ಏರಿದ್ದರು. ಹೈಕೋರ್ಟ್‌ ಶಂಕರ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಶಂಕರ್‌ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

6 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

6 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

6 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

6 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

6 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

7 hours ago