ದೇಶ- ವಿದೇಶ

ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್‌ ಚಾನಲ್‌ ಹ್ಯಾಕ್‌

ನವದೆಹಲಿ: ಸುಪ್ರೀಂ ಕೋರ್ಟ್‍ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ.

ಹ್ಯಾಕ್‌ ಸಂಬಂಧ ತಾಂತ್ರಿಕ ತಂಡಕ್ಕೆ ಮಾಹಿತಿ ನೀಡಿದ್ದು, ತಂಡವು ಪರಿಶೀಲಿಸುತ್ತಿದೆ. ಜತೆಗೆ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.

ತಾಂತ್ರಿಕ ತಂಡ ಸುಪ್ರೀಂ ಕೋರ್ಟ್ ಚಾನೆಲ್ಅನ್ನು ತಾತ್ಕಾಲಿಕ ಸ್ಥಗಿತಗೊಳಿಸಿದೆ. ಈ ಕುರಿತು ಬ್ಯಾಕ್‍ಎಂಡ್ ಟೀಮ್ ಕಾರ್ಯಪ್ರವೃತ್ತರಾಗಿದ್ದು, ಶೀಘ್ರದಲ್ಲೇ ತಾಂತ್ರಿಕ ಸಮಸ್ಯೆ ಬಗೆಹರಿಸಿ ಎಂದಿನಂತೆ ಯೂಟ್ಯೂಬ್ ಚಾನೆಲ್ ಕಾರ್ಯಪ್ರವೃತ್ತಗೊಳ್ಳಲಿದೆ ಎಂದು ಸುಪ್ರೀಂ ಕೋರ್ಟ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಸುಪ್ರೀಂ ಕೋರ್ಟ್ ತನ್ನ ಯೂಟ್ಯೂಬ್ ಚಾನೆಲ್ ಮೂಲಕ ವಿಚಾರಣೆಗಳ ನೇರ ಪ್ರಸಾರ ಮಾಡುತ್ತಿದೆ. ಇತ್ತೀಚೆಗೆ ಕೋಲ್ಕತಾ ಆರ್‍ಜಿ ಕಾರ್ ಆಸ್ಪತ್ರೆ ಪ್ರಕರಣದ ವಿಚಾರಣೆಯನ್ನು ನೇರ ಪ್ರಸಾರ ಮಾಡಿತ್ತು. ಇನ್ನು ಇತರ ವಿಚಾರಣೆಗಳ ವಿಡಿಯೋಗಳು ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್‍ನಲ್ಲಿ ಲಭ್ಯವಿದೆ. ಆದರೆ ಖದೀಮರು ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ್ದಾರೆ. ಬಳಿಕ ಅಮೆರಿಕದ ಮೂಲದ ರಿಪ್ಪಲ್ ಲ್ಯಾಬ್ಸ್ ಜಾಹೀರಾತು ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ. ಈ ಪೈಕಿ ಕ್ರಿಪ್ಟೋಕರೆನ್ಸಿ, ಎಕ್ಸ್‍ಆರ್‍ಪಿ ಸೇರಿದಂತೆ ಇತರ ಕೆಲ ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

23 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

28 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

51 mins ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

14 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

16 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

19 hours ago