ದೇಶ- ವಿದೇಶ

ಅಬ್ಬಾಸ್‌ ಅನ್ಸಾರಿ ವಿರುದ್ಧ ತನಿಖೆ 10 ದಿನಗಳಲ್ಲಿ ಕೊನೆಗೊಳಿಸಿ: ಸುಪ್ರೀಂಕೋರ್ಟ್‌ ಆದೇಶ

ನವದೆಹಲಿ: ಶಾಸಕ ಅಬ್ಬಾಸ್‌ ಅನ್ಸಾ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಾದ ಪ್ರಕರಣದ ತನಿಖೆಯನ್ನು 10 ದಿನಗಳಲ್ಲಿ ಕೊನೆಗೊಳಿಸುವಂತೆ ಉತ್ತರ ಪ್ರದೇಶದ ಪೊಲೀಸರಿಗೆ ಸುಪ್ರೀಂಕೋರ್ಟ್‌ ಆದೇಶ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.21) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಎನ್‌.ಕೋಟಿಶ್ವರ್‌ ಸಿಂಗ್‌ ಅವರಿದ್ದ ನ್ಯಾಯಪೀಠವೂ ಅನ್ಸಾರಿ ಅವರ ವಿರುದ್ಧ ಪ್ರಕರಣದ ತನಿಖೆ ಪೂರ್ಣಗೊಂಡ ನಂತರ ಅವರ ಜಾಮೀನು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಾಗುವುದು ಎಂದು ಹೇಳಿದೆ.

ಏನಿದು ಪ್ರಕರಣ?

ಅನ್ಸಾರಿ ಹಾಗೂ ಇತರ ಕೆಲವು ಜನರು ಗ್ಯಾಂಗ್‌ ರಚಿಸಿದ್ದಾರೆಂದು ಆರೋಪಿಸಲಾಗಿದ್ದು, ಈ ವಿಚಾರವಾಗಿ 2024ರ ಆಗಸ್ಟ್‌ 31 ರಂದು ಚಿತ್ರಕೂಟ ಜಿಲ್ಲೆಯ ಕೊತ್ವಾಲಿ ಕಾರ್ವಿ ಪೊಲೀಸ್‌ ಠಾಣೆಯಲ್ಲಿ ದರೋಡೆಕೋರರು ಹಾಗೂ ಸಮಾಜ ವಿರೋಧಿ ಚಟುವಟಿಕೆಗಳ ಕಾಯ್ದೆಯಡಿ 1986ರ ಸೆಕ್ಷನ್‌ 2 ಮತ್ತು 3 ಅಡಿಯಲ್ಲಿ ಅನ್ಸಾರಿ, ಸಚನ್‌, ನವನೀತ್‌, ನಿಯಾಜ್‌ ಅನ್ಸಾರಿ, ಶಹಬಾಜ್‌ ಆಲಂ ಖಾನ್‌ ಹಾಗೂ ಫರಾಜ್‌ ಖಾನ್‌ ಎಂಬುವವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗತ್ತು. ಅಲ್ಲದೇ ಇವರುಗಳ ವಿರುದ್ಧ ಸುಲ್ಲಿಗೆ ಮತ್ತು ಹಲ್ಲೆ ಆರೋಪವನ್ನು ಹೊರಿಸಲಾಗಿತ್ತು.

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ 2024ರ ಸೆಪ್ಟೆಂಬರ್‌ 6 ರಂದು ಅನ್ಸಾರಿ ಅವರನ್ನು ಬಂಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅನ್ಸಾರಿ ಅವರು ಸಲ್ಲಿಸಲಾದ ಅರ್ಜಿಯನ್ನು ಡಿಸೆಂಬರ್‌. 18 ರಂದು ಅಲಹಾಬಾದ್‌ ಹೈಕೋರ್ಟ್‌ ವಜಾಗೊಳಿಸಿತ್ತು. ಹೀಗಾಗಿ ಈ ಬಗ್ಗೆಯೂ ಕೂಡ ತನಿಕೇ ನಡೆಯುತ್ತಿದೆ ಎಂದು ಕೋರ್ಟ್‌ ತಿಳಿಸಿತ್ತು.

ಅರ್ಚನ ಎಸ್‌ ಎಸ್

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

6 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

6 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

7 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

7 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

7 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

8 hours ago