ನವದೆಹಲಿ: ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ವಕ್ಫ್ ತಿದ್ದುಪಡಿ ಕಾಯ್ದೆ -2025ಕ್ಕೆ ಸಾಂವಿಧಾನಿಕ ಸಿಂಧುತ್ವ ನೀಡಿರುವುದಕ್ಕೆ ಸಂಪೂರ್ಣವಾಗಿ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಆದರೆ, ಕೆಲ ಅಂಶಗಳ ಬದಲಾವಣೆಗೆ ಸೂಚಿಸಲಾಗಿದೆ. ಸಂಪೂರ್ಣ ಕಾನೂನಿಗೆ ತಡೆ ನೀಡಲು ಯಾವುದೇ ಆಧಾರವಿಲ್ಲ. ಕೆಲವು ವಿಭಾಗಗಳ ಬಗ್ಗೆ ವಿವಾದವಿದೆ. ನ್ಯಾಯಾಲಯವು ಇದರ ಬಗ್ಗೆ ಮತ್ತಷ್ಟು ವಿಚಾರಣೆ ನಡೆಸುತ್ತಿದೆ. ಸಾಧ್ಯವಾದಷ್ಟು ಮಟ್ಟಿಗೆ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಸ್ಲಿಮರಾಗಿರಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶಿಸಿದೆ.
ಇದನ್ನೂ ಓದಿ: ರಸ್ತೆ ಬದಿಯ ಗುಂಡಿಗೆ ಇಳಿದ ಟಿಪ್ಪರ್ : ತಪ್ಪಿದ ಅನಾಹುತ
ಕಾಯ್ದಿರಿಸಿದ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ. ಆರ್.ಗವಾಯಿ ಹಾಗೂ ಎ.ಜಿ.ಮಸೀಹ್ ಅವರಿದ್ದ ದ್ವಿಸದಸ್ಯ ಪೀಠವು, ಕಳೆದ ಮೇ22 ರಂದು ಕಾಯ್ದಿರಿಸಿದ್ದ ಆದೇಶವನ್ನು ಪ್ರಕಟಿಸಿತು.
ಯಾವುದೇ ಒಬ್ಬ ವ್ಯಕ್ತಿ ವಕ್ಫ್ ಮಂಡಳಿಯ ಸದಸ್ಯರಾಗಲು ಅಥವಾ ವಕ್ಫ್ ಮಂಡಳಿಗಳಿಗೆ ಭೂಮಿ ದಾನ ಕೊಡಲು ಕನಿಷ್ಠ 5 ವರ್ಷ ಇಸ್ಲಾಂ ಧರ್ಮ ಅನುಸರಿಸಬೇಕೆಂಬ ಷರತ್ತು ವಿಧಿಸಲಾಗಿತ್ತು. ಇದಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಈ ಅಂಶದ ಬಗ್ಗೆ ರಾಜ್ಯ ಸರ್ಕಾರಗಳು ಹೊಸ ನಿಯಮಗಳನ್ನು ರೂಪಿಸುವವರೆಗೂ ತಡೆ ನೀಡಬೇಕು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಇದರೊಂದಿಗೆ ಸೆಕ್ಷನ್ 3(74) ಗೆ ಸಂಬಂಧಿಸಿದ ಕಂದಾಯ ದಾಖಲೆಗಳ ನಿಬಂಧನೆಯನ್ನು ಸಹ ತಡೆಹಿಡಿಯಲಾಗಿದೆ. ವಕ್ಫ್ ತಿದ್ದುಪಡಿ ಕಾಯ್ದೆ 2025ರಲ್ಲಿ ಸೂಚಿಸಿರುವಂತೆ ಕಾನೂನು ಮೂಲಕ ಬಳಕೆ ಹಾಗೂ ಬಳಕೆ ಮೂಲಕ ಮತ್ತು ದಾಖಲೆ ಪತ್ರಗಳ ಮೂಲಕ ವಕ್ಫ್ ಎಂದು ಘೋಷಿಸುವ ಜಮೀನಿನ ಡಿನೋಟಿಫಿಕೇಶನ್ ಅಧಿಕಾರ ಯಾರದ್ದು ಎಂಬುದು ಇತ್ಯರ್ಥವಾಗಲಿದೆ ಎಂದು ತಿಳಿಸಿದೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…