ದೇಶ- ವಿದೇಶ

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ ಅಧಿಕಾರಿಗಳು ಜಾಮೀನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಇದೀಗ ಸುಪ್ರೀಂಕೋರ್ಟ್‌ ಈ ಅರ್ಜಿಯನ್ನು ವಜಾಗೊಳಿಸಿ ಭವಾನಿ ಅವರಿಗೆ ಬಿಗ್‌ ರಿಲೀಫ್‌ ನೀಡಿ ಹೈಕೋರ್ಟ್‌ ಆದೇಶವನ್ನು ಎತ್ತಿ ಹಿಡಿದಿದೆ.

ಆತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ಕೆ.ಆರ್‌.ನಗರ ತಾಲ್ಲೂಕಿನ ಸಂತ್ರಸ್ಥೆಯ ಮಗ ನನ್ನ ತಾಯಿಯನ್ನು ಅಪಹರಣ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಬಳಿಕ ಈ ಕೇಸ್‌ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಎಸ್‌ಐಟಿ ಅಧಿಕಾರಿಗಳು ಈ ಜಾಮೀನು ಅರ್ಜಿಯನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು.

ಎಸ್‌ಐಟಿ ಪರ ವಕೀಲರ ವಾದವೇನು?
ಭವಾನಿ ರೇವಣ್ಣ ಅವರು ಆರೋಪಿಯ ತಾಯಿ ಆಗಿದ್ದಾರೆ. ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸೇರಿದ್ದವರಾಗಿದ್ದಾರೆ. ಅಲ್ಲದೆ, ಪ್ರಕರಣದಲ್ಲಿ ಆರೋಪಿ ಮಹಿಳೆ ನೇರವಾದ ಸಂಬಂಧ ಹೊಂದಿದ್ದಾರೆ. ಹೀಗಾಗಿ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಅನ್ನು ರದ್ದುಗೊಳಿಸಬೇಕು ಎಂದು ವಾದ ಮಂಡಿಸಿದರು.

ಭವಾನಿ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಅಕ್ಟೋಬರ್‌.18) ನ್ಯಾಯಮೂರ್ತಿ ಸೂರ್ಯಕಾಂತ್‌ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿ, ಈಗಾಗಲೇ ಪ್ರಕರಣದಲ್ಲಿ ಚಾರ್ಜ್‌ಶೀಟ್‌ನ್ನು ಸಲ್ಲಿಸಲಾಗಿದೆ. ಅಲ್ಲದೇ, ಪ್ರಕರಣದ ಪ್ರಮುಖ ಆರೋಪಿಗಳನ್ನು ವಿಚಾರಣೆ ನಡೆಸಿ ಬಂಧಿಸಲಾಗಿದೆ. ಈ ಪ್ರಕರಣದ ಹಂತದಲ್ಲಿ ಎಸ್‌ಐಟಿ ಅಧಿಕಾರಿಗಳಿಂದ ಎಲ್ಲಿಯಾದರೂ ತನಿಖೆ ದಾರಿ ತಪ್ಪಿದೆಯಾ? ಒಂದು ವೇಳೆ ತಪ್ಪಿದ್ದರೆ ನಾವು ಆ ಸಂದರ್ಭದಲ್ಲಿ ಮಾತ್ರ ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವ ಘಟನೆಯೂ ಆ ರೀತಿ ನಡೆದಿಲ್ಲ. ಕೆಲ ರಾಜಕಾರಣಿಗಳು ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳಬಹುದು. ಕೇವಲ ರಾಜಕೀಯ ಪ್ರತಿಷ್ಠಿತ ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ ಎಂದು ಸುಪ್ರಿಂಕೋರ್ಟ್‌ ತೀರ್ಪು ನೀಡಿದೆ.

 

ಅರ್ಚನ ಎಸ್‌ ಎಸ್

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

1 hour ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

2 hours ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

2 hours ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

2 hours ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

2 hours ago