ದೇಶ- ವಿದೇಶ

ನೀಟ್- ಪಿಜಿ ಪರೀಕ್ಷೆ ಮುಂದೂಡಿಕೆ ಅರ್ಜಿ ವಜಗೊಳಿಸಿದ ಸುಪ್ರೀಂ

ನವದೆಹಲಿ: ದೇಶಾದ್ಯಂತ ನೀಟ್-ಪಿಜಿ ಪರೀಕ್ಷೆಯನ್ನು ಸುಮಾರು 2,28,542 ಬರೆಯಲಿದ್ದು, ಎರಡು ಪಾಳಿಯಲ್ಲಿ ಸುಮಾರು 170 ನಗರದ 416 ಪರೀಕ್ಷ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಆದರೆ ಸಮಯದ ಅಭಾವದಿಂದ ಪರೀಕ್ಷಾ ಕೇಂದ್ರಗಳನ್ನು ತಲುಪುವುದು ಪರಿಕ್ಷಾರ್ಥಿಗಳಿಗೆ ಕಷ್ಟಸಾಧ್ಯವಾಗುವುದರಿಂದ ಪರೀಕ್ಷೆಗಳನ್ನು ಮುಂದುಡುವಂತೆ ವಿಶಾಲ್ ಸುರೇನ್ ಎಂಬವರು ಸುಪ್ರಿಂ ಮೊರೆಹೊಗಿದ್ದರು.

ವಿಚಾರಾವಾಗಿ ವಕೀಲ ಅನಾಸ್ ತನ್ವೀರ್ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಪರೀಕ್ಷೆ ನಡೆಯಲಿರುವ ನಗರಗಳ ಪಟ್ಟಿಯನ್ನು ಎನ್‌ಟಿಎ ಗುರುವಾರ ಜುಲೈ 31ರಂದು ಪ್ರಕಟಿಸಿದೆ ಹಾಗೂ ನಿರ್ಧಿಷ್ಟ ಪರೀಕ್ಷಾ ಕೇಂದ್ರಗಳನ್ನು ಆಗಸ್ಟ್ 8ರಂದು ಪ್ರಕಟಿಸೋದಾಗಿ ಹೇಳಿದೆ ಆದ್ದರಿಂದ ಪರೀಕ್ಷಾರ್ಥಿಗಳಿಗೆ ನಿಗದಿತ ಸಮಯದೊಳಗೆ ಪರೀಕ್ಷಾ ಕೇಂದ್ರಕ್ಕೆ ಹೋಗುವುದು ಕಷ್ಟವಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಈ ಅರ್ಜಿಗಳನ್ನು ಪರಿಶೀಲಿಸದ್ದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲ ಮತ್ತು ಮನೋಜ್ ಮಿಶ್ರಾ ಅವರ ಪೀಠವೂ ಶುಕ್ರವಾರ ವಿಚಾರಣೆಯನ್ನು ಕೈಗೆತ್ತಿಕೊಳ್ಳೊದಾಗಿ ತಿಳಿಸಿತ್ತು. ಇಂದು ಈ ಕುರಿತು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಪರೀಕ್ಷಾ ಮುಂದೂಡಿಕೆ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

7 mins ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

12 mins ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

34 mins ago

ಮೈಸೂರು: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಮ್ 119ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ…

41 mins ago

ಬೆಂಗಳೂರಿನಲ್ಲಿಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಕದನ

ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌…

1 hour ago

ಇರಾನ್‌ ಮೇಲೆ ಅಮೇರಿಕಾ ಭೀಕರ ದಾಳಿ: ಟಾಪ್‌ ಕಮಾಂಡರ್‌ಗಳ ಹತ್ಯೆ

ಟೆಹರಾನ್:‌ ಟೆಹರಾನ್‌ ಮೇಲೆ ಅಮೇರಿಕಾ ನಡೆಸಿದ ಬೃಹತ್‌ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಈ…

2 hours ago