ನವದೆಹಲಿ: ದೇಶಾದ್ಯಂತ ನೀಟ್-ಪಿಜಿ ಪರೀಕ್ಷೆಯನ್ನು ಸುಮಾರು 2,28,542 ಬರೆಯಲಿದ್ದು, ಎರಡು ಪಾಳಿಯಲ್ಲಿ ಸುಮಾರು 170 ನಗರದ 416 ಪರೀಕ್ಷ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ಆದರೆ ಸಮಯದ ಅಭಾವದಿಂದ ಪರೀಕ್ಷಾ ಕೇಂದ್ರಗಳನ್ನು ತಲುಪುವುದು ಪರಿಕ್ಷಾರ್ಥಿಗಳಿಗೆ ಕಷ್ಟಸಾಧ್ಯವಾಗುವುದರಿಂದ ಪರೀಕ್ಷೆಗಳನ್ನು ಮುಂದುಡುವಂತೆ ವಿಶಾಲ್ ಸುರೇನ್ ಎಂಬವರು ಸುಪ್ರಿಂ ಮೊರೆಹೊಗಿದ್ದರು.
ವಿಚಾರಾವಾಗಿ ವಕೀಲ ಅನಾಸ್ ತನ್ವೀರ್ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಪರೀಕ್ಷೆ ನಡೆಯಲಿರುವ ನಗರಗಳ ಪಟ್ಟಿಯನ್ನು ಎನ್ಟಿಎ ಗುರುವಾರ ಜುಲೈ 31ರಂದು ಪ್ರಕಟಿಸಿದೆ ಹಾಗೂ ನಿರ್ಧಿಷ್ಟ ಪರೀಕ್ಷಾ ಕೇಂದ್ರಗಳನ್ನು ಆಗಸ್ಟ್ 8ರಂದು ಪ್ರಕಟಿಸೋದಾಗಿ ಹೇಳಿದೆ ಆದ್ದರಿಂದ ಪರೀಕ್ಷಾರ್ಥಿಗಳಿಗೆ ನಿಗದಿತ ಸಮಯದೊಳಗೆ ಪರೀಕ್ಷಾ ಕೇಂದ್ರಕ್ಕೆ ಹೋಗುವುದು ಕಷ್ಟವಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
ಈ ಅರ್ಜಿಗಳನ್ನು ಪರಿಶೀಲಿಸದ್ದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲ ಮತ್ತು ಮನೋಜ್ ಮಿಶ್ರಾ ಅವರ ಪೀಠವೂ ಶುಕ್ರವಾರ ವಿಚಾರಣೆಯನ್ನು ಕೈಗೆತ್ತಿಕೊಳ್ಳೊದಾಗಿ ತಿಳಿಸಿತ್ತು. ಇಂದು ಈ ಕುರಿತು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಪರೀಕ್ಷಾ ಮುಂದೂಡಿಕೆ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…