ದೇಶ- ವಿದೇಶ

ರೇಣುಕಾಸ್ವಾಮಿ ಕೊಲೆ ಪ್ರಕರಣ| ದರ್ಶನ್‌ ಸೇರಿದಂತೆ ಏಳು ಆರೋಪಿಗಳಿಗೆ ನೋಟಿಸ್‌ ಜಾರಿ: ಸುಪ್ರೀಂ ಕೋರ್ಟ್‌

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಸೇರಿದಂತೆ ಏಳು ಆರೋಪಿಗಳಿಗೆ ನೋಟಿಸ್‌ ಜಾರಿಗೊಳಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಪವಿತ್ರಾ ಗೌಡ(ಎ1), ದರ್ಶನ್‌(ಎ2), ಜಗ್ಗದೀಶ್‌(ಎ6), ಅನುಕುಮಾರ್‌(ಎ7), ಆರ್‌.ನಾಗರಾಜು(ಎ11), ಎಂ.ಲಕ್ಷ್ಮಣ್‌(ಎ12) ಹಾಗೂ ಪ್ರದೋಶ್‌ ಎಸ್‌.ರಾವ್‌(ಎ14) ಅವರಿಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಅರ್ಜಿಯನ್ನು ರದ್ದು ಮಾಡುವಂತೆ  ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ಅನ್ವಯ ಇಂದು(ಜನವರಿ.24) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಆರೋಪಿಗಳ ವಾದವನ್ನು ಸಹ ಕೇಳಬೇಕಾಗುತ್ತದೆ. ಹೀಗಾಗಿ ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಮತ್ತು ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಅರ್ಜಿಯನ್ನು ರದ್ದು ಮಾಡುವಂತೆ ಕೋರಿ ಬೆಂಗಳೂರು ಪೊಲೀಸರು, ವಕೀಲ ಅನಿಲ್‌ ನಿಶಾನಿ ಮುಖಾಂತರ  ಸುಪ್ರೀಂಕೋರ್ಟ್‌ಗೆ  ಮೇಲ್ಮನವಿ ಸಲ್ಲಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

1 hour ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

2 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

2 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

2 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

2 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

3 hours ago