ದೇಶ- ವಿದೇಶ

ರೇಣುಕಾಸ್ವಾಮಿ ಕೊಲೆ ಪ್ರಕರಣ| ದರ್ಶನ್‌ ಸೇರಿದಂತೆ ಏಳು ಆರೋಪಿಗಳಿಗೆ ನೋಟಿಸ್‌ ಜಾರಿ: ಸುಪ್ರೀಂ ಕೋರ್ಟ್‌

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಸೇರಿದಂತೆ ಏಳು ಆರೋಪಿಗಳಿಗೆ ನೋಟಿಸ್‌ ಜಾರಿಗೊಳಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಪವಿತ್ರಾ ಗೌಡ(ಎ1), ದರ್ಶನ್‌(ಎ2), ಜಗ್ಗದೀಶ್‌(ಎ6), ಅನುಕುಮಾರ್‌(ಎ7), ಆರ್‌.ನಾಗರಾಜು(ಎ11), ಎಂ.ಲಕ್ಷ್ಮಣ್‌(ಎ12) ಹಾಗೂ ಪ್ರದೋಶ್‌ ಎಸ್‌.ರಾವ್‌(ಎ14) ಅವರಿಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಅರ್ಜಿಯನ್ನು ರದ್ದು ಮಾಡುವಂತೆ  ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ಅನ್ವಯ ಇಂದು(ಜನವರಿ.24) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಆರೋಪಿಗಳ ವಾದವನ್ನು ಸಹ ಕೇಳಬೇಕಾಗುತ್ತದೆ. ಹೀಗಾಗಿ ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಮತ್ತು ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಅರ್ಜಿಯನ್ನು ರದ್ದು ಮಾಡುವಂತೆ ಕೋರಿ ಬೆಂಗಳೂರು ಪೊಲೀಸರು, ವಕೀಲ ಅನಿಲ್‌ ನಿಶಾನಿ ಮುಖಾಂತರ  ಸುಪ್ರೀಂಕೋರ್ಟ್‌ಗೆ  ಮೇಲ್ಮನವಿ ಸಲ್ಲಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

1 min ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

3 mins ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

5 mins ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

10 mins ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

14 mins ago

ಹಳೆಯ ಹಳವಂಡಗಳಿಲ್ಲದ ಭವಿಷ್ಯದ ಬೆಳಕು ಈ ಜೆನ್ ಝೀಗಳು

ಸುಧಾ ಆಡುಕಳ ಶುಭಂ ಹದಿಹರಯವನ್ನು ಇತ್ತೀಚೆಗಷ್ಟೇ ದಾಟಿದ ಹೊಸ ತಲೆಮಾರಿನ ಹುಡುಗ. ಹಳ್ಳಿಯಲ್ಲಿ ಹುಟ್ಟಿ ಬೆಳೆದ ಅವನಮ್ಮ ಹೇಳುವ ಕತೆಗಳೆಂದರೆ…

20 mins ago