ದೇಶ- ವಿದೇಶ

ಅಕ್ರಮ ಮತಾಂತರ| ಕೊಲೆ, ಅತ್ಯಾಚಾರದಷ್ಟು ಗಂಭೀರ ಅಪರಾಧವಲ್ಲ: ಸುಪ್ರೀಂಕೋರ್ಟ್‌

ನವದೆಹಲಿ: ಅಕ್ರಮವಾಗಿ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಳಿಸುವುದು ಕೊಲೆ, ಅತ್ಯಾಚಾರ ಹಾಗೂ ಕಳ್ಳತನದಷ್ಟು ಗಂಭೀರ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ.

ಈ ವಿಚಾರವಾಗಿ ಇಂದು(ಜನವರಿ.28) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಹಾಗೂ ಆರ್‌.ಮಹದೇವನ್‌ ಅವರಿದ್ದ ದ್ವಿಸದಸ್ಯ ಪೀಠವೂ ಬುದ್ದಿಮಾಂದ್ಯ ಬಾಲಕನನ್ನು ಇಸ್ಲಾಂಗೆ ಮತಾಂತರಿಸಿದ್ದ ಆರೋಪಿ ಮೌಲ್ವಿಗೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.

ಇನ್ನೂ ಈ ವೇಳೆ ಜಾಮೀನು ಅರ್ಜಿಯನ್ನು ಪರಿಗಣಿಸುವಾಗ ವಿಚಾರಣಾ ನ್ಯಾಯಾಧೀಶರಿಗೆ ಸಿಆರ್‌ಪಿಸಿ ಸೆಕ್ಷನ್ 439 ಅಥವಾ ಬಿಎನ್‌ಎಸ್‌ಎಸ್ ಸೆಕ್ಷನ್ 483ರ ವ್ಯಾಪ್ತಿ ತಿಳಿಯದ ಕಾರಣವಾಗಿ ವಿವೇಚನೆಯನ್ನು ಹೇಗೆ ಚಲಾಯಿಸಬೇಕು ಎಂಬುದನ್ನು ವಿಚಾರಣಾ ನ್ಯಾಯಾಧೀಶರು ಅರ್ಥಮಾಡಿಕೊಳ್ಳುವುದಕ್ಕಾಗಿ ಪ್ರತಿ ವರ್ಷ ಹಲವು ಸಮ್ಮೇಳನಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದೆ. ಅಲ್ಲದೇ ತಮ್ಮ ವಿವೇಚನೆಯನ್ನು ಹೇಗೆ ಚಲಾಯಿಸಬೇಕೆಂಬ ಬಗ್ಗೆ ಸಮ್ಮೇಳನ ಹಾಗೂ ಉಪನ್ಯಾಸ ಕಾರ್ಯಕ್ರಮಗಳಿಗೆ ಹಾಜರಾಗಿದ್ದರೂ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ತಿರಸ್ಕರಿಸಲು ತಮ್ಮ ವಿವೇಚನೆಯನ್ನು ಹೆಚ್ಚಾಗಿ ಬಳಸುತ್ತಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಒಂದು ತಿಂಗಳು ʼಜಲ ಸಂರಕ್ಷಣಾ ಅಭಿಯಾನʼ: ಡಿಕೆ ಶಿವಕುಮಾರ್‌

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…

20 mins ago

ಸರ್ವಜ್ಞನಗರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…

46 mins ago

ಹೊಸ 7 ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…

1 hour ago

ವೈದ್ಯರ ನಿವೃತ್ತಿ ವಯಸ್ಸು ಏರಿಸಲು ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…

2 hours ago

ನಿಯಮ ಪಾಲಿಸಿದರೆ ಗಣಿಗಾರಿಕೆಗೆ ಅನುಮತಿ: ಈಶ್ವರ್‌ ಖಂಡ್ರೆ

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ…

3 hours ago

ಅಪ್ಪು ಸಿನಿಮಾ ರೀ-ರಿಲೀಸ್‌: ನೆನೆದು ಭಾವುಕರಾದ ರಾಘಣ್ಣ

ಪುನೀತ್‌ ರಾಜಕುಮಾರ್‌ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್‌ಸ್ಟಾರ್‌ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್‌…

3 hours ago