ನವದೆಹಲಿ: ಅಕ್ರಮವಾಗಿ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಳಿಸುವುದು ಕೊಲೆ, ಅತ್ಯಾಚಾರ ಹಾಗೂ ಕಳ್ಳತನದಷ್ಟು ಗಂಭೀರ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ವಿಚಾರವಾಗಿ ಇಂದು(ಜನವರಿ.28) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಹಾಗೂ ಆರ್.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠವೂ ಬುದ್ದಿಮಾಂದ್ಯ ಬಾಲಕನನ್ನು ಇಸ್ಲಾಂಗೆ ಮತಾಂತರಿಸಿದ್ದ ಆರೋಪಿ ಮೌಲ್ವಿಗೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.
ಇನ್ನೂ ಈ ವೇಳೆ ಜಾಮೀನು ಅರ್ಜಿಯನ್ನು ಪರಿಗಣಿಸುವಾಗ ವಿಚಾರಣಾ ನ್ಯಾಯಾಧೀಶರಿಗೆ ಸಿಆರ್ಪಿಸಿ ಸೆಕ್ಷನ್ 439 ಅಥವಾ ಬಿಎನ್ಎಸ್ಎಸ್ ಸೆಕ್ಷನ್ 483ರ ವ್ಯಾಪ್ತಿ ತಿಳಿಯದ ಕಾರಣವಾಗಿ ವಿವೇಚನೆಯನ್ನು ಹೇಗೆ ಚಲಾಯಿಸಬೇಕು ಎಂಬುದನ್ನು ವಿಚಾರಣಾ ನ್ಯಾಯಾಧೀಶರು ಅರ್ಥಮಾಡಿಕೊಳ್ಳುವುದಕ್ಕಾಗಿ ಪ್ರತಿ ವರ್ಷ ಹಲವು ಸಮ್ಮೇಳನಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದೆ. ಅಲ್ಲದೇ ತಮ್ಮ ವಿವೇಚನೆಯನ್ನು ಹೇಗೆ ಚಲಾಯಿಸಬೇಕೆಂಬ ಬಗ್ಗೆ ಸಮ್ಮೇಳನ ಹಾಗೂ ಉಪನ್ಯಾಸ ಕಾರ್ಯಕ್ರಮಗಳಿಗೆ ಹಾಜರಾಗಿದ್ದರೂ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ತಿರಸ್ಕರಿಸಲು ತಮ್ಮ ವಿವೇಚನೆಯನ್ನು ಹೆಚ್ಚಾಗಿ ಬಳಸುತ್ತಾರೆ ಎಂದು ವ್ಯಂಗ್ಯ ಮಾಡಿದ್ದಾರೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…