ದೇಶ- ವಿದೇಶ

ಅಕ್ರಮ ಮತಾಂತರ| ಕೊಲೆ, ಅತ್ಯಾಚಾರದಷ್ಟು ಗಂಭೀರ ಅಪರಾಧವಲ್ಲ: ಸುಪ್ರೀಂಕೋರ್ಟ್‌

ನವದೆಹಲಿ: ಅಕ್ರಮವಾಗಿ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಳಿಸುವುದು ಕೊಲೆ, ಅತ್ಯಾಚಾರ ಹಾಗೂ ಕಳ್ಳತನದಷ್ಟು ಗಂಭೀರ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ.

ಈ ವಿಚಾರವಾಗಿ ಇಂದು(ಜನವರಿ.28) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಹಾಗೂ ಆರ್‌.ಮಹದೇವನ್‌ ಅವರಿದ್ದ ದ್ವಿಸದಸ್ಯ ಪೀಠವೂ ಬುದ್ದಿಮಾಂದ್ಯ ಬಾಲಕನನ್ನು ಇಸ್ಲಾಂಗೆ ಮತಾಂತರಿಸಿದ್ದ ಆರೋಪಿ ಮೌಲ್ವಿಗೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.

ಇನ್ನೂ ಈ ವೇಳೆ ಜಾಮೀನು ಅರ್ಜಿಯನ್ನು ಪರಿಗಣಿಸುವಾಗ ವಿಚಾರಣಾ ನ್ಯಾಯಾಧೀಶರಿಗೆ ಸಿಆರ್‌ಪಿಸಿ ಸೆಕ್ಷನ್ 439 ಅಥವಾ ಬಿಎನ್‌ಎಸ್‌ಎಸ್ ಸೆಕ್ಷನ್ 483ರ ವ್ಯಾಪ್ತಿ ತಿಳಿಯದ ಕಾರಣವಾಗಿ ವಿವೇಚನೆಯನ್ನು ಹೇಗೆ ಚಲಾಯಿಸಬೇಕು ಎಂಬುದನ್ನು ವಿಚಾರಣಾ ನ್ಯಾಯಾಧೀಶರು ಅರ್ಥಮಾಡಿಕೊಳ್ಳುವುದಕ್ಕಾಗಿ ಪ್ರತಿ ವರ್ಷ ಹಲವು ಸಮ್ಮೇಳನಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದೆ. ಅಲ್ಲದೇ ತಮ್ಮ ವಿವೇಚನೆಯನ್ನು ಹೇಗೆ ಚಲಾಯಿಸಬೇಕೆಂಬ ಬಗ್ಗೆ ಸಮ್ಮೇಳನ ಹಾಗೂ ಉಪನ್ಯಾಸ ಕಾರ್ಯಕ್ರಮಗಳಿಗೆ ಹಾಜರಾಗಿದ್ದರೂ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ತಿರಸ್ಕರಿಸಲು ತಮ್ಮ ವಿವೇಚನೆಯನ್ನು ಹೆಚ್ಚಾಗಿ ಬಳಸುತ್ತಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago