Supreme Court
ಹೊಸದಿಲ್ಲಿ : ವಿಶೇಷಚೇತನರನ್ನು ತಮ್ಮ ಸ್ಟ್ಯಾಂಡ್-ಅಪ್ ಕಾರ್ಯಕ್ರಮಗಳಲ್ಲಿ ಅಪಹಾಸ್ಯ ಮಾಡುವ ‘ಅಸಂವೇದನಾಶೀಲ ಹಾಸ್ಯʼ ಕ್ಕಾಗಿ ಹಾಸ್ಯಕಲಾವಿದರನ್ನು ಸರ್ವೋಚ್ಚ ನ್ಯಾಯಾಲಯ ಸೋಮವಾರ ತರಾಟೆಗೆ ತೆಗೆದುಕೊಂಡಿದ್ದು, ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕವೂ ಕ್ಷಮೆಯಾಚಿಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ.
ಯೂಟ್ಯೂಬರ್ಗಳು ಮತ್ತು ಆನ್ಲೈನ್ ಪ್ರಭಾವಿಗಳು ಆಕ್ಷೇಪಾರ್ಹ ವಿಷಯಕ್ಕಾಗಿ ಅಂಗವಿಕಲ ವ್ಯಕ್ತಿಗಳಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ನಿರ್ದೇಶಿಸಿದೆ ಮತ್ತು ಉಲ್ಲಂಘನೆಗಳಿಗೆ ಆರ್ಥಿಕ ದಂಡ ವಿಧಿಸಬಹುದು ಎಂದು ಎಚ್ಚರಿಸಿದೆ.
ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ತಮ್ಮ ವೇದಿಕೆಗಳನ್ನು ಬಳಸಲು ತೆಗೆದುಕೊಳ್ಳಬಹುದಾದ ಕ್ರಮಗಳನ್ನು ವಿವರಿಸುವ ಅಫಿಡವಿಟ್ ಅನ್ನು ಸಲ್ಲಿಸುವಂತೆಯೂ ಸುಪ್ರೀಂ ಕೋರ್ಟ್ ಪ್ರಭಾವಿಗಳನ್ನು ಕೇಳಿದೆ.
ಹಾಸ್ಯನಟರಾದ ಸಮಯ್ ರೈನಾ, ವಿಪುನ್ ಗೋಯಲ್, ಬಲರಾಜ್ ಪರಮಜೀತ್ ಸಿಂಗ್ ಘಾಯ್, ಸೋನಾಲಿ ಥಕ್ಕರ್ ಮತ್ತು ನಿಶಾಂತ್ ಜಗದೀಶ್ ತನ್ವರ್ ಅವರು ಅಂಗವಿಕಲರಿಗಾಗಿ ‘ಅಸಂವೇದನಾಶೀಲ ಹಾಸ್ಯ‘ ಮಾಡಿದ್ದಾರೆ ಎಂದು ಆರೋಪಿಸಿ ಎಸ್ಎಂಎ ಕ್ಯೂರ್ ಫೌಂಡೇಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸವೋಚ್ಚ ನ್ಯಾಯಾಲಯ ಈ ಆದೇಶ ನೀಡಿದೆ.
ನೀವು ನ್ಯಾಯಾಲಯದ ಮುಂದೆ ಕ್ಷಮೆಯಾಚಿಸಿದ್ದೀರಿ, ನಿಮ್ಮ ಸಾಮಾಜಿಕ ಮಾಧ್ಯಮದ ಮುಂದೆಯೂ ಕ್ಷಮೆಯಾಚಿಸಿ‘ ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಹಾಸ್ಯನಟರಿಗೆ ಸೂಚಿಸಿತು.
ಹಾಸ್ಯವು ಜೀವನದ ಒಂದು ಭಾಗ ಮತ್ತು ನಾವು ನಮ್ಮನ್ನು ಹಾಸ್ಯ ಮಾಡಬಹುದು. ಆದರೆ ನೀವು ಇತರರನ್ನು ಗೇಲಿ ಮಾಡಲು ಪ್ರಾರಂಭಿಸಿದಾಗ, ಸೂಕ್ಷ್ಮತೆಯ ಉಲ್ಲಂಘನೆಯಾಗುತ್ತದೆ. ಭಾರತವು ಹಲವಾರು ಸಮುದಾಯಗಳನ್ನು ಹೊಂದಿರುವ ವೈವಿಧ್ಯಮಯ ದೇಶವಾಗಿದೆ ಮತ್ತು ಇವರು ಇಂದಿನ ಪ್ರಭಾವಿಗಳು ಎಂದು ಕರೆಯಲ್ಪಡುವವರು… ನೀವು ಭಾಷಣವನ್ನು ವಾಣಿಜ್ಯೀಕರಣಗೊಳಿಸುವಾಗ, ನೀವು ಒಂದು ಸಮುದಾಯವನ್ನು ಬಳಸಿಕೊಂಡು ಅವರ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಬಾಗ್ಚಿ ಹೇಳಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…