ದೇಶ- ವಿದೇಶ

ಇದು ಜೇಮ್ಸ್‌ ಬಾಂಡ್ ಸೀಕ್ವೆಲ್ ಅಲ್ಲ; ಸುಪ್ರೀಂ‌ ಕೋರ್ಟ್ ತರಾಟೆ

ಹೊಸದಿಲ್ಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿಯಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಪದೇಪದೇ ಅರ್ಜಿ ಸಲ್ಲಿಸುತ್ತಿರುವುದರ ಕುರಿತು ಗರಂ ಆಗಿರುವ ಸುಪ್ರೀಂ ಕೋರ್ಟ್, ಇದು ಜೇಮ್ಸ್ ಬಾಂಡ್ ಸೀಕ್ವೆಲ್ ಅಲ್ಲ ಎಂದು ಕಿಡಿಕಾರಿದೆ.

ಹಂಗಾಮಿ ನ್ಯಾಯಮೂರ್ತಿ ಮನಮೋಹನ್ ಹಾಗೂ ನ್ಯಾಯಮೂರ್ತಿ ಮನ್ಮೀತ್ ಪಿ.ಎಸ್. ಅರೋರಾ ಅವರಿದ್ದ ವಿಭಾಗೀಯ ಪೀಠವು ಅರ್ಜಿದಾರ, ಮಾಜಿ ಎಎಪಿ ಶಾಸಕ ಸಂದೀಪ್ ಕುಮಾರ್ ಅವರಿಗೆ 50 ಸಾವಿರ ದಂಡವನ್ನೂ ಸಹ ವಿಧಿಸಿದೆ.

‘ಒಂದೊಂದು ಭಾಗಗಳನ್ನು ಹೊಂದಿರುವುದಕ್ಕೆ ಇದು ಜೇಮ್ಸ್ ಬಾಂಡ್ ಸಿನಿಮಾ ಸೀಕ್ವೆಲ್ ಅಲ್ಲ. ಈ ಕುರಿತಾಗಿ ಯಾವ ಕ್ರಮ ಕೈಗೊಳ್ಳಬೇಕೆಂಬುದನ್ನು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ನಿರ್ಧರಿಸುತ್ತಾರೆ‌. ರಾಜಕೀಯ ಉದ್ದೇಶದಿಂದ ನೀವು ಇಲ್ಲಿಗೆ ಬಂದಿದ್ದೀರಿ ಅಷ್ಟೆ’ ಎಂದು ಕೋರ್ಟ್ ಅರ್ಜಿದಾರರ ವಿರುದ್ಧ ಕಿಡಿಕಾರಿದೆ.

andolana

Recent Posts

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

1 hour ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

1 hour ago

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…

1 hour ago

ಓದುಗರ ಪತ್ರ; ಸಫಾರಿಗೆ ಅನುಮತಿ ಖಂಡನೀಯ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…

1 hour ago

ತಂಪಾದ ಕೊಡಗಿನಲ್ಲಿಯೂ ಹೆಚ್ಚುತ್ತಿದೆ ತಾಪ

ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…

2 hours ago

ಜೀವವೂ ಉಳಿಯಬೇಕು, ಜೀವನೋಪಾಯವೂ ನಡೆಯಬೇಕು

ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…

2 hours ago