rahul gandhi
ನವದೆಹಲಿ: ನಿಜವಾದ ಭಾರತೀಯನಾದವನು ಈ ರೀತಿ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ.
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಚೀನಾ 2000 ಕಿಲೋ ಮೀಟರ್ನಷ್ಟು ಭಾರತದ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ ಭಾರತೀಯರಾಗಿದ್ದರೆ, ಈ ರೀತಿ ಹೇಳುತ್ತಿರಲಿಲ್ಲ. ಈ ವಿಚಾರವನ್ನು ಸಂಸತ್ ಅಧಿವೇಶನದಲ್ಲಿ ಯಾಕೆ ಪ್ರಶ್ನೆ ಮಾಡಲಿಲ್ಲ. ನಿಮ್ಮ ಹೇಳಿಕೆಗೆ ದಾಖಲೆ ಏನಾದರೂ ಇದೆಯಾ ಎಂದು ಪ್ರಶ್ನೆ ಮಾಡಿದೆ.
ಇನ್ನು ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಅವರು, ಭಾರತದ ಗಡಿ ಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ. ಜೊತೆಗೆ 20 ಭಾರತೀಯ ಸೈನಿಕರನ್ನು ಕೊಂದು, ಅರುಣಾಚಲ ಪ್ರದೇಶದಲ್ಲಿ ನಮ್ಮ ಸೈನಿಕರನ್ನು ಥಳಿಸಿರುವುದರ ಬಗ್ಗೆ ಮಾಧ್ಯಮಗಳು ಒಂದೇ ಒಂದು ಪ್ರಶ್ನೆಯನ್ನು ಕೇಳುವುದಿಲ್ಲ ಎಂದು ಹೇಳಿದ್ದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…