ದೇಶ- ವಿದೇಶ

ಕರ್ನಾಟಕ ರಾಜ್ಯ ಹೈಕೋರ್ಟ್‌ನ ನ್ಯಾಯಾಧೀಶರ ಹುದ್ದೆಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಕರ್ನಾಟಕ ರಾಜ್ಯದ ಹೈಕೋರ್ಟ್‌ನಲ್ಲಿ 158 ಸಿವಿಲ್‌ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಯ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ.

ಈ ಕುರಿತು ಪೂರಕ ಅಧಿಸೂಚನೆ ಹೊರಡಿಸಿರುವ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರುಗಳ ನೇಮಕಾತಿ ಸಮಿತಿ ಮಹಾ ವಿಲೇಖನಾಧಿಕಾರಿ ಹಾಗೂ ಕಾರ್ಯದರ್ಶಿ ಕೆ.ಎಸ್.ಭರತ್ ಕುಮಾರ್ ಅವರು, ಕರ್ನಾಟಕ ಹೈಕೋರ್ಟ್‌ನ 158 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲು 10/02/2025 ರಂದು ಹೊರಡಿಸಲಾದ ಅಧಿಸೂಚನೆ ಸಂಖ್ಯೆ. HCRB/CJR-1/2024 ಮತ್ತು ಅದರ ಮೇಲಿನ ಮುಂದಿನ ಕ್ರಮಗಳನ್ನು ಭಾರತದ ಸುಪ್ರೀಂಕೋರ್ಟ್‌ ರಿಟ್‌ ಅರ್ಜಿ(ಸಿವಿಲ್‌) ಸಂಖ್ಯೆ 1022/1989 ರಲ್ಲಿನ IA ಸಂಖ್ಯೆ 72900/2021, 73015/2021, 40695/2021, 50269/2022, 201893/2022, 93974/2019 (ಅಖಿಲ ಭಾರತ ನ್ಯಾಯಾಧೀಶರ ಸಂಘ ಮತ್ತು ಇತರರು Vs, ಭಾರತ ಸರ್ಕಾರ ಮತ್ತು ಇತರರು) ನಲ್ಲಿ ತೀರ್ಪು ನೀಡುವವರೆಗೆ ತಡೆಹಿಡಿಯಲಾಗಿದೆ ಎಂದು ಈ ಮೂಲಕ ಅಧಿಸೂಚಿಸಲಾಗಿದೆ ಎಂದು ಹೇಳಿದೆ.

ಕರ್ನಾಟಕ ಹೈಕೋರ್ಟ್‌ ನ್ಯಾಯಾಲಯವು ಅಗತ್ಯ ಸಿವಿಲ್‌ ನ್ಯಾಯಾಧೀಶರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕಕ್ಕೆ ಅಧಿಸೂಚನೆ ಬಿಡುಗಡೆ ಹೊರಡಿಸಿತ್ತು. ಆ ಮೂಲಕ 158 ಸಿವಿಲ್‌ ಜಡ್ಜ್‌ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತರಿಂದ ಅರ್ಜಿ ಆಹ್ವಾನಿಸಿ 2025ರ ಫೆಬ್ರವರಿ 10 ರಂದು ಅಧಿಸೂಚನೆ ಹೊರಡಿಸಿ ಮಾರ್ಚ್.‌12ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದು ಉಲ್ಲೇಖಿಸಲಾಗಿತ್ತು.

ಅರ್ಚನ ಎಸ್‌ ಎಸ್

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

2 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

2 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

2 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

3 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

3 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

3 hours ago