ನವದೆಹಲಿ: ಕರ್ನಾಟಕ ರಾಜ್ಯದ ಹೈಕೋರ್ಟ್ನಲ್ಲಿ 158 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಯ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಕುರಿತು ಪೂರಕ ಅಧಿಸೂಚನೆ ಹೊರಡಿಸಿರುವ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರುಗಳ ನೇಮಕಾತಿ ಸಮಿತಿ ಮಹಾ ವಿಲೇಖನಾಧಿಕಾರಿ ಹಾಗೂ ಕಾರ್ಯದರ್ಶಿ ಕೆ.ಎಸ್.ಭರತ್ ಕುಮಾರ್ ಅವರು, ಕರ್ನಾಟಕ ಹೈಕೋರ್ಟ್ನ 158 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲು 10/02/2025 ರಂದು ಹೊರಡಿಸಲಾದ ಅಧಿಸೂಚನೆ ಸಂಖ್ಯೆ. HCRB/CJR-1/2024 ಮತ್ತು ಅದರ ಮೇಲಿನ ಮುಂದಿನ ಕ್ರಮಗಳನ್ನು ಭಾರತದ ಸುಪ್ರೀಂಕೋರ್ಟ್ ರಿಟ್ ಅರ್ಜಿ(ಸಿವಿಲ್) ಸಂಖ್ಯೆ 1022/1989 ರಲ್ಲಿನ IA ಸಂಖ್ಯೆ 72900/2021, 73015/2021, 40695/2021, 50269/2022, 201893/2022, 93974/2019 (ಅಖಿಲ ಭಾರತ ನ್ಯಾಯಾಧೀಶರ ಸಂಘ ಮತ್ತು ಇತರರು Vs, ಭಾರತ ಸರ್ಕಾರ ಮತ್ತು ಇತರರು) ನಲ್ಲಿ ತೀರ್ಪು ನೀಡುವವರೆಗೆ ತಡೆಹಿಡಿಯಲಾಗಿದೆ ಎಂದು ಈ ಮೂಲಕ ಅಧಿಸೂಚಿಸಲಾಗಿದೆ ಎಂದು ಹೇಳಿದೆ.
ಕರ್ನಾಟಕ ಹೈಕೋರ್ಟ್ ನ್ಯಾಯಾಲಯವು ಅಗತ್ಯ ಸಿವಿಲ್ ನ್ಯಾಯಾಧೀಶರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕಕ್ಕೆ ಅಧಿಸೂಚನೆ ಬಿಡುಗಡೆ ಹೊರಡಿಸಿತ್ತು. ಆ ಮೂಲಕ 158 ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತರಿಂದ ಅರ್ಜಿ ಆಹ್ವಾನಿಸಿ 2025ರ ಫೆಬ್ರವರಿ 10 ರಂದು ಅಧಿಸೂಚನೆ ಹೊರಡಿಸಿ ಮಾರ್ಚ್.12ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದು ಉಲ್ಲೇಖಿಸಲಾಗಿತ್ತು.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…