ದೇಶ- ವಿದೇಶ

ಕರ್ನಾಟಕ ರಾಜ್ಯ ಹೈಕೋರ್ಟ್‌ನ ನ್ಯಾಯಾಧೀಶರ ಹುದ್ದೆಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಕರ್ನಾಟಕ ರಾಜ್ಯದ ಹೈಕೋರ್ಟ್‌ನಲ್ಲಿ 158 ಸಿವಿಲ್‌ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಯ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ.

ಈ ಕುರಿತು ಪೂರಕ ಅಧಿಸೂಚನೆ ಹೊರಡಿಸಿರುವ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರುಗಳ ನೇಮಕಾತಿ ಸಮಿತಿ ಮಹಾ ವಿಲೇಖನಾಧಿಕಾರಿ ಹಾಗೂ ಕಾರ್ಯದರ್ಶಿ ಕೆ.ಎಸ್.ಭರತ್ ಕುಮಾರ್ ಅವರು, ಕರ್ನಾಟಕ ಹೈಕೋರ್ಟ್‌ನ 158 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲು 10/02/2025 ರಂದು ಹೊರಡಿಸಲಾದ ಅಧಿಸೂಚನೆ ಸಂಖ್ಯೆ. HCRB/CJR-1/2024 ಮತ್ತು ಅದರ ಮೇಲಿನ ಮುಂದಿನ ಕ್ರಮಗಳನ್ನು ಭಾರತದ ಸುಪ್ರೀಂಕೋರ್ಟ್‌ ರಿಟ್‌ ಅರ್ಜಿ(ಸಿವಿಲ್‌) ಸಂಖ್ಯೆ 1022/1989 ರಲ್ಲಿನ IA ಸಂಖ್ಯೆ 72900/2021, 73015/2021, 40695/2021, 50269/2022, 201893/2022, 93974/2019 (ಅಖಿಲ ಭಾರತ ನ್ಯಾಯಾಧೀಶರ ಸಂಘ ಮತ್ತು ಇತರರು Vs, ಭಾರತ ಸರ್ಕಾರ ಮತ್ತು ಇತರರು) ನಲ್ಲಿ ತೀರ್ಪು ನೀಡುವವರೆಗೆ ತಡೆಹಿಡಿಯಲಾಗಿದೆ ಎಂದು ಈ ಮೂಲಕ ಅಧಿಸೂಚಿಸಲಾಗಿದೆ ಎಂದು ಹೇಳಿದೆ.

ಕರ್ನಾಟಕ ಹೈಕೋರ್ಟ್‌ ನ್ಯಾಯಾಲಯವು ಅಗತ್ಯ ಸಿವಿಲ್‌ ನ್ಯಾಯಾಧೀಶರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕಕ್ಕೆ ಅಧಿಸೂಚನೆ ಬಿಡುಗಡೆ ಹೊರಡಿಸಿತ್ತು. ಆ ಮೂಲಕ 158 ಸಿವಿಲ್‌ ಜಡ್ಜ್‌ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತರಿಂದ ಅರ್ಜಿ ಆಹ್ವಾನಿಸಿ 2025ರ ಫೆಬ್ರವರಿ 10 ರಂದು ಅಧಿಸೂಚನೆ ಹೊರಡಿಸಿ ಮಾರ್ಚ್.‌12ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದು ಉಲ್ಲೇಖಿಸಲಾಗಿತ್ತು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

13 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

13 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

13 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

13 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

13 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

13 hours ago