ದೇಶ- ವಿದೇಶ

ಕರ್ನಲ್‌ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ: ಸಚಿವ ವಿಜಯ್‌ ಶಾಗೆ ಸುಪ್ರೀಂಕೋರ್ಟ್ ತೀವ್ರ ತರಾಟೆ

ನವದೆಹಲಿ- ಪಾಕಿಸ್ತಾನ ವಿರುದ್ದ ಯಶಸ್ವಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಹಲವರು ಉಗ್ರರು ಹಾಗೂ ಉಗ್ರಗಾಮಿ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತೀಯ ವಾಯುಪಡೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶದದ ಸಚಿವ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಹೇಳಿಕೆ ಸಂಬಂಧ ವಿಚಾರಣೆ ನಡೆಸಿದ್ದ ಜಬ್ಬಲ್ಪುರ ಹೈಕೋರ್ಟ್ ಸಚಿವ ವಿಜಯ್ ಶಾ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಆದೇಶಿಸಿತ್ತು. ಈ ಆದೇಶದ ಬೆನ್ನಲ್ಲೇ ವಿಜಯ್ ಶಾ, ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಈ ರೀತಿ ಹೇಳಿಕೆಗಳನ್ನು ನೀಡುವಾಗ ಎಚ್ಚರವಿರಲಿ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ:- ಪಾಕ್‌ ವಿರುದ್ಧ ಆಪರೇಷನ್‌ ಸಿಂಧೂರ ಯಶಸ್ವಿ: ಬಿಜೆಪಿಯಿಂದ ತಿರಂಗಾ ಯಾತ್ರೆ 

ತಮ್ಮ ಅರ್ಜಿಯ ತ್ವರಿತ ವಿಚಾರಣೆಗೆ ವಿಜಯ್ ಶಾ ಒತ್ತಾಯಿಸಿದ್ದರು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಪ್ರಾರಂಭಿಸಲು ಹೈಕೋರ್ಟ್ ನೀಡಿದ ನಿರ್ದೇಶನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು. ಒಂದು ದಿನದಲ್ಲಿ ನಿಮಗೆ ಏನೂ ಆಗುವುದಿಲ್ಲ. ನೀವು ಯಾರೆಂದು ನಿಮಗೆ ತಿಳಿದಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಬಂಧನದಿಂದ ಮಧ್ಯಂತರ ರಕ್ಷಣೆಗಾಗಿ ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿದೆ. ಶುಕ್ರವಾರ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

2 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

2 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

2 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

2 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

2 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

2 hours ago