karnal sophia khureshi
ನವದೆಹಲಿ- ಪಾಕಿಸ್ತಾನ ವಿರುದ್ದ ಯಶಸ್ವಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಹಲವರು ಉಗ್ರರು ಹಾಗೂ ಉಗ್ರಗಾಮಿ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತೀಯ ವಾಯುಪಡೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶದದ ಸಚಿವ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಹೇಳಿಕೆ ಸಂಬಂಧ ವಿಚಾರಣೆ ನಡೆಸಿದ್ದ ಜಬ್ಬಲ್ಪುರ ಹೈಕೋರ್ಟ್ ಸಚಿವ ವಿಜಯ್ ಶಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆದೇಶಿಸಿತ್ತು. ಈ ಆದೇಶದ ಬೆನ್ನಲ್ಲೇ ವಿಜಯ್ ಶಾ, ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಈ ರೀತಿ ಹೇಳಿಕೆಗಳನ್ನು ನೀಡುವಾಗ ಎಚ್ಚರವಿರಲಿ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಇದನ್ನೂ ಓದಿ:- ಪಾಕ್ ವಿರುದ್ಧ ಆಪರೇಷನ್ ಸಿಂಧೂರ ಯಶಸ್ವಿ: ಬಿಜೆಪಿಯಿಂದ ತಿರಂಗಾ ಯಾತ್ರೆ
ತಮ್ಮ ಅರ್ಜಿಯ ತ್ವರಿತ ವಿಚಾರಣೆಗೆ ವಿಜಯ್ ಶಾ ಒತ್ತಾಯಿಸಿದ್ದರು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಪ್ರಾರಂಭಿಸಲು ಹೈಕೋರ್ಟ್ ನೀಡಿದ ನಿರ್ದೇಶನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು. ಒಂದು ದಿನದಲ್ಲಿ ನಿಮಗೆ ಏನೂ ಆಗುವುದಿಲ್ಲ. ನೀವು ಯಾರೆಂದು ನಿಮಗೆ ತಿಳಿದಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಬಂಧನದಿಂದ ಮಧ್ಯಂತರ ರಕ್ಷಣೆಗಾಗಿ ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿದೆ. ಶುಕ್ರವಾರ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…